<p><strong>ಕಂಪ್ಲಿ:</strong> ತಾಲ್ಲೂಕಿನ ಹೊಸ ನೆಲ್ಲೂಡಿಯಿಂದ ತಾಯಮ್ಮನಕಟ್ಟೆಯವರೆಗೆ ಗುಂಡಿಗಳಿಂದ ಕೂಡಿದ್ದ 1.5 ಕಿ.ಮೀ ರಸ್ತೆಯನ್ನು ರೈತರು ತಮ್ಮ ಸ್ವಂತ ಖರ್ಚಿನಲ್ಲಿ ದುರಸ್ತಿಪಡಿಸಿಕೊಂಡಿದ್ದಾರೆ.</p>.<p>ಚಿಕ್ಕಜಾಯಿಗನೂರು ಗ್ರಾಮದಿಂದ ತಾಯಮ್ಮನಕಟ್ಟೆವರೆಗೆ ಈಗಾಗಲೇ ರಸ್ತೆ ಅಭಿವೃದ್ಧಿಗೊಂಡಿದ್ದು, ಮುಂದಿನ ಭಾಗದ ರಸ್ತೆ ಅಭಿವೃದ್ಧಿ ಕುಂಠಿತಗೊಂಡಿತ್ತು. ಈ ಕುರಿತು ಅನೇಕ ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ರೈತರು ದೂರಿದರು.</p>.<p>ಹಾಳಾದ ಈ ರಸ್ತೆ ತುಂಬಾ ಗುಂಡಿಗಳಿಂದ ಕೂಡಿದ್ದು, ಮಳೆ ಬಂದಾಗ ರಸ್ತೆಯೇ ಕಾಣದೆ ಕೆಸರು ಗದ್ದೆಯಂತಾಗುತ್ತಿತ್ತು. ಇಂಥ ರಸ್ತೆಯಲ್ಲಿ ಬೈಕ್ ಸವಾರರು ಆಯ ತಪ್ಪಿ ಬಿದ್ದು, ಗಾಯಗೊಂಡಿದ್ದಾರೆ. ಕೆಲ ವಾಹನ ಚಾಲಕರು ಈ ರಸ್ತೆ ಮೂಲಕ ಸಾಗಲು ಹರಸಾಹಸಪಡುವುದು ಸಾಮಾನ್ಯ. ಇನ್ನು ಟ್ರ್ಯಾಕ್ಟರ್ಗಳು ರಸ್ತೆಯಲ್ಲಿಯೇ ಸಿಲುಕಿ ಹೊಲ ಗದ್ದೆಗಳನ್ನು ತಲುಪದೆ ತೊಂದರೆ ಅನುಭವಿಸುವುದು ನಿತ್ಯ ಗೋಳಾಟವಾಗಿತ್ತು ಎಂದು ರೈತರು ಬೇಸರದಿಂದ ತಿಳಿಸಿದರು.</p>.<p>ಅದರಿಂದ ಬೇಸತ್ತು ಜೆಸಿಬಿ ಯಂತ್ರದಿಂದ ಸದ್ಯ ತಾತ್ಕಾಲಿಕವಾಗಿ ರಸ್ತೆ ದುರಸ್ತಿಯನ್ನು ಸ್ವಂತ ಖರ್ಚಿನಲ್ಲಿ ಮಾಡಿಕೊಂಡಿರುವುದಾಗಿ ರೈತರಾದ ವೆಂಕಟರಾಮರೆಡ್ಡಿ, ಈಶ್ವರರೆಡ್ಡಿ, ರಮೇಶ, ನಾರಾಯಣರೆಡ್ಡಿ, ವೆಂಕಟೇಶರೆಡ್ಡಿ, ಗೋಪಾಲ, ಇಸ್ಮಾಯಿಲ್, ಕೃಷ್ಣರೆಡ್ಡಿ, ರಮೇಶ, ಅಚ್ಚಿರೆಡ್ಡಿ, ಶ್ರೀನಿವಾಸರೆಡ್ಡಿ ಇತರರು ತಿಳಿಸಿದರು.<br></p><p>ಪಿಡಬ್ಲ್ಯುಡಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಶಾಶ್ವತ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಂಡಲ್ಲಿ ಮುಂದಿನ ದಿನ ಹೊಲದಲ್ಲಿ ಬೆಳೆದ ಫಸಲು ಸಾಗಾಟಕ್ಕೆ ಅನುಕೂಲವಾಗಲಿದೆ ಎಂದು ರೈತರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತಾಲ್ಲೂಕಿನ ಹೊಸ ನೆಲ್ಲೂಡಿಯಿಂದ ತಾಯಮ್ಮನಕಟ್ಟೆಯವರೆಗೆ ಗುಂಡಿಗಳಿಂದ ಕೂಡಿದ್ದ 1.5 ಕಿ.ಮೀ ರಸ್ತೆಯನ್ನು ರೈತರು ತಮ್ಮ ಸ್ವಂತ ಖರ್ಚಿನಲ್ಲಿ ದುರಸ್ತಿಪಡಿಸಿಕೊಂಡಿದ್ದಾರೆ.</p>.<p>ಚಿಕ್ಕಜಾಯಿಗನೂರು ಗ್ರಾಮದಿಂದ ತಾಯಮ್ಮನಕಟ್ಟೆವರೆಗೆ ಈಗಾಗಲೇ ರಸ್ತೆ ಅಭಿವೃದ್ಧಿಗೊಂಡಿದ್ದು, ಮುಂದಿನ ಭಾಗದ ರಸ್ತೆ ಅಭಿವೃದ್ಧಿ ಕುಂಠಿತಗೊಂಡಿತ್ತು. ಈ ಕುರಿತು ಅನೇಕ ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ರೈತರು ದೂರಿದರು.</p>.<p>ಹಾಳಾದ ಈ ರಸ್ತೆ ತುಂಬಾ ಗುಂಡಿಗಳಿಂದ ಕೂಡಿದ್ದು, ಮಳೆ ಬಂದಾಗ ರಸ್ತೆಯೇ ಕಾಣದೆ ಕೆಸರು ಗದ್ದೆಯಂತಾಗುತ್ತಿತ್ತು. ಇಂಥ ರಸ್ತೆಯಲ್ಲಿ ಬೈಕ್ ಸವಾರರು ಆಯ ತಪ್ಪಿ ಬಿದ್ದು, ಗಾಯಗೊಂಡಿದ್ದಾರೆ. ಕೆಲ ವಾಹನ ಚಾಲಕರು ಈ ರಸ್ತೆ ಮೂಲಕ ಸಾಗಲು ಹರಸಾಹಸಪಡುವುದು ಸಾಮಾನ್ಯ. ಇನ್ನು ಟ್ರ್ಯಾಕ್ಟರ್ಗಳು ರಸ್ತೆಯಲ್ಲಿಯೇ ಸಿಲುಕಿ ಹೊಲ ಗದ್ದೆಗಳನ್ನು ತಲುಪದೆ ತೊಂದರೆ ಅನುಭವಿಸುವುದು ನಿತ್ಯ ಗೋಳಾಟವಾಗಿತ್ತು ಎಂದು ರೈತರು ಬೇಸರದಿಂದ ತಿಳಿಸಿದರು.</p>.<p>ಅದರಿಂದ ಬೇಸತ್ತು ಜೆಸಿಬಿ ಯಂತ್ರದಿಂದ ಸದ್ಯ ತಾತ್ಕಾಲಿಕವಾಗಿ ರಸ್ತೆ ದುರಸ್ತಿಯನ್ನು ಸ್ವಂತ ಖರ್ಚಿನಲ್ಲಿ ಮಾಡಿಕೊಂಡಿರುವುದಾಗಿ ರೈತರಾದ ವೆಂಕಟರಾಮರೆಡ್ಡಿ, ಈಶ್ವರರೆಡ್ಡಿ, ರಮೇಶ, ನಾರಾಯಣರೆಡ್ಡಿ, ವೆಂಕಟೇಶರೆಡ್ಡಿ, ಗೋಪಾಲ, ಇಸ್ಮಾಯಿಲ್, ಕೃಷ್ಣರೆಡ್ಡಿ, ರಮೇಶ, ಅಚ್ಚಿರೆಡ್ಡಿ, ಶ್ರೀನಿವಾಸರೆಡ್ಡಿ ಇತರರು ತಿಳಿಸಿದರು.<br></p><p>ಪಿಡಬ್ಲ್ಯುಡಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಶಾಶ್ವತ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಂಡಲ್ಲಿ ಮುಂದಿನ ದಿನ ಹೊಲದಲ್ಲಿ ಬೆಳೆದ ಫಸಲು ಸಾಗಾಟಕ್ಕೆ ಅನುಕೂಲವಾಗಲಿದೆ ಎಂದು ರೈತರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>