<p><strong>ಕುರುಗೋಡು</strong>: ತಾಲ್ಲೂಕಿನ ಬಾದನಹಟ್ಟಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾಪುರಾಣ ಮುಕ್ತಾಯದ ಅಂಗವಾಗಿ ವೀರಭದ್ರೇಶ್ವರ ಅಗ್ನಿಕುಂಡ ಕಾರ್ಯಕ್ರಮ ಭಾನುವಾರ ಜರುಗಿತು.</p>.<p>ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಮಡಿಬಟ್ಟೆ ತೊಟ್ಟು ಅಗ್ನಿಕುಂಡದಲ್ಲಿ ನಡೆದು ಭಕ್ತಿ ಮೆರೆದರು. ಇದಕ್ಕೂ ಮೊದಲು ಸುಮಂಗಳೆಯರು ಪುರವಂತರೊಡಗೂಡಿ ಗಂಗೆಸ್ಥಳಕ್ಕೆ ತೆರಳಿ ನೀರನ್ನು ಮೆರವಣಿಗೆಯಲ್ಲಿ ತಂದು ವೀರಭದ್ರೇಶ್ವರ ಸ್ವಾಮಿಗೆ ಸಮರ್ಪಿಸಿದರು. ದೇವಸ್ಥಾನದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.</p>.<p>11 ದಿನಗಳ ಕಾಲ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾಪುರಾಣ ಭಾನುವಾರ ಮುಕ್ತಾಯಗೊಂಡಿತು. ಕೆ.ಮೌನೇಶ್ ಆಚಾರ್ ಪುರಾಣ ಪ್ರವಚನ ನೀಡಿದರು. ಪಿ.ಮಂಜುನಾಥ ಪುರಾಣ ಪಠಣ ಮಾಡಿದರು. ವೈ.ನಾಗೇಶ್ ಸಂಗೀತಸೇವೆ ಸಲ್ಲಿಸಿದರು. ಕೆ.ಕರಿಬಸವನಗೌಡ ಹಾರ್ಮೋನಿಯಂ ನುಡಿಸಿದರು. ಎಚ್.ಮಲ್ಲಿಗೌಡ ಮತ್ತು ಎಂ.ಪಾಂಡುರಂಗ ತಬಲಾ ಸಾಥ್ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ತಾಲ್ಲೂಕಿನ ಬಾದನಹಟ್ಟಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾಪುರಾಣ ಮುಕ್ತಾಯದ ಅಂಗವಾಗಿ ವೀರಭದ್ರೇಶ್ವರ ಅಗ್ನಿಕುಂಡ ಕಾರ್ಯಕ್ರಮ ಭಾನುವಾರ ಜರುಗಿತು.</p>.<p>ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಮಡಿಬಟ್ಟೆ ತೊಟ್ಟು ಅಗ್ನಿಕುಂಡದಲ್ಲಿ ನಡೆದು ಭಕ್ತಿ ಮೆರೆದರು. ಇದಕ್ಕೂ ಮೊದಲು ಸುಮಂಗಳೆಯರು ಪುರವಂತರೊಡಗೂಡಿ ಗಂಗೆಸ್ಥಳಕ್ಕೆ ತೆರಳಿ ನೀರನ್ನು ಮೆರವಣಿಗೆಯಲ್ಲಿ ತಂದು ವೀರಭದ್ರೇಶ್ವರ ಸ್ವಾಮಿಗೆ ಸಮರ್ಪಿಸಿದರು. ದೇವಸ್ಥಾನದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.</p>.<p>11 ದಿನಗಳ ಕಾಲ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾಪುರಾಣ ಭಾನುವಾರ ಮುಕ್ತಾಯಗೊಂಡಿತು. ಕೆ.ಮೌನೇಶ್ ಆಚಾರ್ ಪುರಾಣ ಪ್ರವಚನ ನೀಡಿದರು. ಪಿ.ಮಂಜುನಾಥ ಪುರಾಣ ಪಠಣ ಮಾಡಿದರು. ವೈ.ನಾಗೇಶ್ ಸಂಗೀತಸೇವೆ ಸಲ್ಲಿಸಿದರು. ಕೆ.ಕರಿಬಸವನಗೌಡ ಹಾರ್ಮೋನಿಯಂ ನುಡಿಸಿದರು. ಎಚ್.ಮಲ್ಲಿಗೌಡ ಮತ್ತು ಎಂ.ಪಾಂಡುರಂಗ ತಬಲಾ ಸಾಥ್ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>