<p><strong>ಕಂಪ್ಲಿ:</strong> ‘ಸಂಪೂರ್ಣ ಐದು ವರ್ಷಗಳ ಅವಧಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರಲಿದ್ದಾರೆ’ ಎಂದು ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.</p>.<p>ತಾಲ್ಲೂಕಿನ ಬಳ್ಳಾಪುರ ಗ್ರಾಮದಲ್ಲಿ ₹35ಲಕ್ಷ ವೆಚ್ಚದ ಸಿ.ಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿರುವುದನ್ನು ಸಹಿಸದ ಬಿಜೆಪಿ ಮುಖಂಡರು ಅಸಮಾಧಾನದ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ನ ಎಲ್ಲ ಶಾಸಕರು, ಮಠಾಧೀಶರ ಜೊತೆಗೆ ಬಿಜೆಪಿಯ ಕೆಲ ಶಾಸಕರ ಬೆಂಬಲವೂ ಇದೆ’ ಎಂದು ಹೇಳಿದರು.</p>.<p>ಗ್ರಾಮದ ರಸ್ತೆಗಳ ಅಭಿವೃದ್ಧಿ ಮತ್ತು ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಒದಗಿಸುವ ಕುರಿತಂತೆ ರೈತರೊಂದಿಗೆ ಸಮಾಲೋಚಿಸಿದರು.</p>.<p>ಇದಕ್ಕೂ ಮುನ್ನ ಶ್ರೀರಾಮರಂಗಾಪುರದಲ್ಲೂ ₹21.49ಲಕ್ಷ ವೆಚ್ಚದ ಸಿ.ಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರೆವೇರಿಸಿದರು. ಮುಖಂಡರಾದ ಬಿ. ಲಿಂಗಪ್ಪ, ಮೌನೇಶ್, ಜಡೆಪ್ಪ, ಎಸ್.ಆರ್. ಪುರದ, ಬಿ. ವೆಂಕಟಪತಿ, ವಿ. ರಾಮಾಂಜನೇಯಲು, ಬಿ. ಮಂಜುನಾಥ, ಶ್ರೀನಿವಾಸ, ನಾಗಭೂಷಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ‘ಸಂಪೂರ್ಣ ಐದು ವರ್ಷಗಳ ಅವಧಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರಲಿದ್ದಾರೆ’ ಎಂದು ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.</p>.<p>ತಾಲ್ಲೂಕಿನ ಬಳ್ಳಾಪುರ ಗ್ರಾಮದಲ್ಲಿ ₹35ಲಕ್ಷ ವೆಚ್ಚದ ಸಿ.ಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿರುವುದನ್ನು ಸಹಿಸದ ಬಿಜೆಪಿ ಮುಖಂಡರು ಅಸಮಾಧಾನದ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ನ ಎಲ್ಲ ಶಾಸಕರು, ಮಠಾಧೀಶರ ಜೊತೆಗೆ ಬಿಜೆಪಿಯ ಕೆಲ ಶಾಸಕರ ಬೆಂಬಲವೂ ಇದೆ’ ಎಂದು ಹೇಳಿದರು.</p>.<p>ಗ್ರಾಮದ ರಸ್ತೆಗಳ ಅಭಿವೃದ್ಧಿ ಮತ್ತು ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಒದಗಿಸುವ ಕುರಿತಂತೆ ರೈತರೊಂದಿಗೆ ಸಮಾಲೋಚಿಸಿದರು.</p>.<p>ಇದಕ್ಕೂ ಮುನ್ನ ಶ್ರೀರಾಮರಂಗಾಪುರದಲ್ಲೂ ₹21.49ಲಕ್ಷ ವೆಚ್ಚದ ಸಿ.ಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರೆವೇರಿಸಿದರು. ಮುಖಂಡರಾದ ಬಿ. ಲಿಂಗಪ್ಪ, ಮೌನೇಶ್, ಜಡೆಪ್ಪ, ಎಸ್.ಆರ್. ಪುರದ, ಬಿ. ವೆಂಕಟಪತಿ, ವಿ. ರಾಮಾಂಜನೇಯಲು, ಬಿ. ಮಂಜುನಾಥ, ಶ್ರೀನಿವಾಸ, ನಾಗಭೂಷಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>