<p><strong>ಕುಡತಿನಿ</strong> (ತೋರಣಗಲ್ಲು): ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದಲ್ಲಿನ ವಿಶ್ವಕರ್ಮ ಸಮಾಜದ ಬಡ ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ವಿಶೇಷ ಕೌಶಲಾಭರಿತ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಕುಡತಿನಿಯ ವಿಶ್ವಕರ್ಮ ಸಮಾಜದ ಸೇವಾ ಟ್ರಷ್ಟ್ ನ ಅಧ್ಯಕ್ಷ ನಾಗಲಿಂಗ ಆಚಾರಿ ಒತ್ತಾಯಿಸಿದರು.</p>.<p>ಇಲ್ಲಿನ ವಿಶ್ವಕರ್ಮ ಸಮಾಜದ ಸೇವಾ ಟ್ರಸ್ಟ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಶ್ರೀ ವಿಶ್ವಕರ್ಮ ಜಗದ್ಗುರು ಕಾಳಹಸ್ತೇಂದ್ರ ಸ್ವಾಮಿಗಳ 90ನೇ ವರ್ಷದ ಆರಾಧನ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕುಡತಿನಿ ಪಟ್ಟಣದಲ್ಲಿನ ವಿಶ್ವಕರ್ಮ ಸಮಾಜದ ಬಡ ಜನರ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳನ್ನು ನೆರವೇರಿಸಲು ಪಟ್ಟಣ ಪಂಚಾಯಿತಿಯವರು ಸರ್ಕಾರದ ಅನುದಾನದಲ್ಲಿ ನೂತನ ಸಮುದಾಯ ಭವನ ನಿರ್ಮಿಸಬೇಕು’ ಎಂದರು.</p>.<p>ವಿಶ್ವಕರ್ಮ ಜಗದ್ಗುರು ಕಾಳಹಸ್ತೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವದ ಅಂಗವಾಗಿ ಭಕ್ತಾಧಿಗಳಿಂದ ಸ್ವಾಮಿಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯು ಸಂಭ್ರಮದಿಂದ ನಡೆಯಿತು.</p>.<p>ಸಮಾಜದ ಮುಖಂಡರಾದ ಪಿ.ಜಗದೀಶ್, ಹನುಮೇಶ್, ವೀರಭದ್ರಪ್ಪ, ಮೌನೇಶ್, ವಿರೇಶ್, ಕಾಳಪ್ಪ, ಬ್ರಮ್ಮಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಡತಿನಿ</strong> (ತೋರಣಗಲ್ಲು): ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದಲ್ಲಿನ ವಿಶ್ವಕರ್ಮ ಸಮಾಜದ ಬಡ ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ವಿಶೇಷ ಕೌಶಲಾಭರಿತ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಕುಡತಿನಿಯ ವಿಶ್ವಕರ್ಮ ಸಮಾಜದ ಸೇವಾ ಟ್ರಷ್ಟ್ ನ ಅಧ್ಯಕ್ಷ ನಾಗಲಿಂಗ ಆಚಾರಿ ಒತ್ತಾಯಿಸಿದರು.</p>.<p>ಇಲ್ಲಿನ ವಿಶ್ವಕರ್ಮ ಸಮಾಜದ ಸೇವಾ ಟ್ರಸ್ಟ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಶ್ರೀ ವಿಶ್ವಕರ್ಮ ಜಗದ್ಗುರು ಕಾಳಹಸ್ತೇಂದ್ರ ಸ್ವಾಮಿಗಳ 90ನೇ ವರ್ಷದ ಆರಾಧನ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕುಡತಿನಿ ಪಟ್ಟಣದಲ್ಲಿನ ವಿಶ್ವಕರ್ಮ ಸಮಾಜದ ಬಡ ಜನರ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳನ್ನು ನೆರವೇರಿಸಲು ಪಟ್ಟಣ ಪಂಚಾಯಿತಿಯವರು ಸರ್ಕಾರದ ಅನುದಾನದಲ್ಲಿ ನೂತನ ಸಮುದಾಯ ಭವನ ನಿರ್ಮಿಸಬೇಕು’ ಎಂದರು.</p>.<p>ವಿಶ್ವಕರ್ಮ ಜಗದ್ಗುರು ಕಾಳಹಸ್ತೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವದ ಅಂಗವಾಗಿ ಭಕ್ತಾಧಿಗಳಿಂದ ಸ್ವಾಮಿಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯು ಸಂಭ್ರಮದಿಂದ ನಡೆಯಿತು.</p>.<p>ಸಮಾಜದ ಮುಖಂಡರಾದ ಪಿ.ಜಗದೀಶ್, ಹನುಮೇಶ್, ವೀರಭದ್ರಪ್ಪ, ಮೌನೇಶ್, ವಿರೇಶ್, ಕಾಳಪ್ಪ, ಬ್ರಮ್ಮಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>