<p>ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬುಧವಾರ ಅನಿರೀಕ್ಷಿತವಾಗಿ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ.</p>.<p>ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ್ ನಿರ್ದೇಶನದ ಮೇರೆಗೆ ‘ಕಾರಾಗೃಹ ಸುಧಾರಣಾ ಸಂಕಲ್ಪ’ ಅಭಿಯಾನದಡಿ ಡಿ.17ರ ರಾತ್ರಿ 9ರಿಂದ 10.30ರವರೆಗೆ ಕಾರಾಗೃಹದ ಒಳಗೆ ಅನಿರೀಕ್ಷಿತ ತಪಾಸಣೆ ನಡೆಸಲಾಗಿದ್ದು, 4 ಕೀ-ಪ್ಯಾಡ್ ಮೊಬೈಲ್, 1 ಚಾರ್ಜರ್, 3 ಯುಎಸ್ಬಿ ಕನೆಕ್ಟರ್ ಕೇಬಲ್, 1 ಇಯರ್ ಫೋನ್ ಪತ್ತೆಯಾಗಿವೆ ಎಂದು ಅಧೀಕ್ಷಕರು ಹೇಳಿದ್ದಾರೆ. </p>.<p>ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಹಾಗೂ ನಿಷೇಧಿತ ವಸ್ತುಗಳನ್ನು ಉಪಯೋಗಿಸಿದವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ 2022ರ ಕಲಂ 42ರನ್ವಯ ಹಾಗೂ ಇತರೆ ಕಲಂಗಳಡಿ ಕ್ರಮ ಕೈಗೊಳ್ಳಲು ಬಳ್ಳಾರಿಯ ಬೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.</p>.<p>ಸಿಬ್ಬಂದಿಗೆ ಬಹುಮಾನ: ತಪಾಸಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿರುವ ಡಿಜಿಪಿ ಅಲೋಕ ಕುಮಾರ್ ಅವರು, ತಂಡಕ್ಕೆ ₹10,000 ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಿದ್ದಾರೆ ಎಂದು ಕೇಂದ್ರ ಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬುಧವಾರ ಅನಿರೀಕ್ಷಿತವಾಗಿ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ.</p>.<p>ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ್ ನಿರ್ದೇಶನದ ಮೇರೆಗೆ ‘ಕಾರಾಗೃಹ ಸುಧಾರಣಾ ಸಂಕಲ್ಪ’ ಅಭಿಯಾನದಡಿ ಡಿ.17ರ ರಾತ್ರಿ 9ರಿಂದ 10.30ರವರೆಗೆ ಕಾರಾಗೃಹದ ಒಳಗೆ ಅನಿರೀಕ್ಷಿತ ತಪಾಸಣೆ ನಡೆಸಲಾಗಿದ್ದು, 4 ಕೀ-ಪ್ಯಾಡ್ ಮೊಬೈಲ್, 1 ಚಾರ್ಜರ್, 3 ಯುಎಸ್ಬಿ ಕನೆಕ್ಟರ್ ಕೇಬಲ್, 1 ಇಯರ್ ಫೋನ್ ಪತ್ತೆಯಾಗಿವೆ ಎಂದು ಅಧೀಕ್ಷಕರು ಹೇಳಿದ್ದಾರೆ. </p>.<p>ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಹಾಗೂ ನಿಷೇಧಿತ ವಸ್ತುಗಳನ್ನು ಉಪಯೋಗಿಸಿದವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ 2022ರ ಕಲಂ 42ರನ್ವಯ ಹಾಗೂ ಇತರೆ ಕಲಂಗಳಡಿ ಕ್ರಮ ಕೈಗೊಳ್ಳಲು ಬಳ್ಳಾರಿಯ ಬೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.</p>.<p>ಸಿಬ್ಬಂದಿಗೆ ಬಹುಮಾನ: ತಪಾಸಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿರುವ ಡಿಜಿಪಿ ಅಲೋಕ ಕುಮಾರ್ ಅವರು, ತಂಡಕ್ಕೆ ₹10,000 ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಿದ್ದಾರೆ ಎಂದು ಕೇಂದ್ರ ಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>