<p><strong>ಬಳ್ಳಾರಿ:</strong> ‘ಗಾಂಧೀಜಿ ಅವರ ಸತ್ಯ, ಅಹಿಂಸೆಯ ಮಾರ್ಗದಲ್ಲಿ ಪ್ರತಿಯೊಬ್ಬರೂ ಮುನ್ನಡೆಯೋಣ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ‘ಯುವ ಪೀಳಿಗೆಯು ಉತ್ತಮ ಶಿಕ್ಷಣ ಪಡೆದುಕೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಮಾತನಾಡಿ, ‘ಗಾಂಧೀಜಿ ಅವರು ‘ನನ್ನ ಜೀವನವೇ ನನ್ನ ಸಂದೇಶ’ ಎಂದು, ಲಾಲ್ ಬಹದ್ದೂರು ಶಾಸ್ತ್ರಿ ಅವರು ‘ಜೈ ಜವಾನ್, ಜೈ ಕಿಸಾನ್’ ಎಂದು ಹೇಳಿದ್ದಾರೆ. ಈ ಇಬ್ಬರು ಮಹಾನ್ ನಾಯಕರ ಆದರ್ಶ ಪಾಲನೆ ಮಾಡಿದರೆ ಉತ್ತಮ ಸಮಾಜ ನಿರ್ಮಾಣ ಮಾಡಬಹುದು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ’ ಎಂದರು.</p>.<p>ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ‘1921ರ ಅ.1ರಂದು ಗಾಂಧೀಜಿ ಅವರು ಪ್ರಥಮ ಬಾರಿಗೆ ಬಳ್ಳಾರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಬಳ್ಳಾರಿ ರೈಲು ನಿಲ್ದಾಣದಲ್ಲಿ ತಂಗಿದ್ದರು’ ಎಂದು ಸ್ಮರಿಸಿದರು.</p>.<p>ಉಪನ್ಯಾಸಕ ಅಮಾತಿ ಬಸವರಾಜ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸರ್ವಧರ್ಮ ಗ್ರಂಥಗಳ ಪಠಣ ಮಾಡಿದರು.</p>.<p>ಬಾಪೂಜಿ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಗಾಂಧೀಜಿ ಅವರ ಸತ್ಯ, ಅಹಿಂಸೆಯ ಮಾರ್ಗದಲ್ಲಿ ಪ್ರತಿಯೊಬ್ಬರೂ ಮುನ್ನಡೆಯೋಣ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ‘ಯುವ ಪೀಳಿಗೆಯು ಉತ್ತಮ ಶಿಕ್ಷಣ ಪಡೆದುಕೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಮಾತನಾಡಿ, ‘ಗಾಂಧೀಜಿ ಅವರು ‘ನನ್ನ ಜೀವನವೇ ನನ್ನ ಸಂದೇಶ’ ಎಂದು, ಲಾಲ್ ಬಹದ್ದೂರು ಶಾಸ್ತ್ರಿ ಅವರು ‘ಜೈ ಜವಾನ್, ಜೈ ಕಿಸಾನ್’ ಎಂದು ಹೇಳಿದ್ದಾರೆ. ಈ ಇಬ್ಬರು ಮಹಾನ್ ನಾಯಕರ ಆದರ್ಶ ಪಾಲನೆ ಮಾಡಿದರೆ ಉತ್ತಮ ಸಮಾಜ ನಿರ್ಮಾಣ ಮಾಡಬಹುದು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ’ ಎಂದರು.</p>.<p>ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ‘1921ರ ಅ.1ರಂದು ಗಾಂಧೀಜಿ ಅವರು ಪ್ರಥಮ ಬಾರಿಗೆ ಬಳ್ಳಾರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಬಳ್ಳಾರಿ ರೈಲು ನಿಲ್ದಾಣದಲ್ಲಿ ತಂಗಿದ್ದರು’ ಎಂದು ಸ್ಮರಿಸಿದರು.</p>.<p>ಉಪನ್ಯಾಸಕ ಅಮಾತಿ ಬಸವರಾಜ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸರ್ವಧರ್ಮ ಗ್ರಂಥಗಳ ಪಠಣ ಮಾಡಿದರು.</p>.<p>ಬಾಪೂಜಿ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>