<p><strong>ಕಂಪ್ಲಿ:</strong> ರಾಜ್ಯ ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ(ಎಸ್.ಟಿ) ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದರು.</p>.<p>ಎಚ್. ವೀರಾಪುರ ಗ್ರಾಮದ ಮೀನುಕೃಷಿ ಕೊಳಗಳಿಗೆ ಭೇಟಿ ನೀಡಲು ಶನಿವಾರ ಪಟ್ಟಣಕ್ಕೆ ಆಗಮಿಸಿದ್ದ ಸಚಿವರನ್ನು ಸ್ಥಳೀಯ ಗಂಗಾಮತಸ್ಥರು ಸ್ವಾಗತಿಸಿದ ಬಳಿಕ ಸಮುದಾಯದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಮೀನುಕೃಷಿ ಕೊಳಗಳ ಮಾಲೀಕರಿಗೆ ವಿದ್ಯುತ್ ಬಿಲ್ ಹೆಚ್ಚಳವಾಗಿರುವ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದರು.</p>.<p>ಶಾಸಕ ಜೆ.ಎನ್. ಗಣೇಶ್ ಮಾತನಾಡಿ, ‘ಪಟ್ಟಣದ ಮೀನುಗಾರರಿಗೆ ಮೀನು ಮಾರುಕಟ್ಟೆ, ಕೋಲ್ಡ್ ಸ್ಟೋರೇಜ್, ಮೀನುಗಾರ ಕುಟುಂಬಗಳಿಗೆ ವಸತಿ ಸೌಲಭ್ಯ ತುಂಬಾ ಅಗತ್ಯವಿದ್ದು, ಸಚಿವರು ಆದ್ಯತೆ ನೀಡಬೇಕಿದೆ’ ಎಂದು ಆಗ್ರಹಿಸಿದರು.</p>.<p>ಗಂಗಾಮತಸ್ಥರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಲಿಗಾರ ನಾಗರಾಜ ಮಾತನಾಡಿ, ಮೀನುಗಾರರಿಗೆ ದೊರೆಯಬೇಕಾದ ಸರ್ಕಾರದ ಸೌಲಭ್ಯಗಳನ್ನು ಅನ್ಯರು ಕಬಳಿಸುತ್ತಿದ್ದಾರೆ. ಸಚಿವರು ಗಮನಹರಿಸಿ ಬೆಸ್ತ, ಗಂಗಾಮತಸ್ಥರಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಗಂಗಾಮತ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನವಿದ್ದು, ಭವನ ನಿರ್ಮಾಣಕ್ಕೆ ₹1ಕೋಟಿ ಮಂಜೂರು ಮಾಡುವಂತೆ ಮನವಿ ಮಾಡಿದರು.</p>.<p>ಸಮಾಜದ ಪ್ರಮುಖರಾದ ಬಿ. ಸಿದ್ದಪ್ಪ, ಕರೇಕಲ್ ಮನೋಹರ, ಅಯ್ಯೋದಿ ವೆಂಕಟೇಶ, ಕಟ್ಟೆ ಸಣ್ಣ ದುರುಗಪ್ಪ, ಎ. ತಾಯಣ್ಣ, ಬಿ. ನೇಣ್ಕಿ ಗಿರೀಶ, ಆಟೊ ರಾಘವೇಂದ್ರ, ಕೆ.ಪ್ರಕಾಶ, ನಡವಿ ಮಂಜುನಾಥ, ಮುಖಂಡ ಬಿ. ನಾರಾಯಣಪ್ಪ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ರಾಜ್ಯ ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ(ಎಸ್.ಟಿ) ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದರು.</p>.<p>ಎಚ್. ವೀರಾಪುರ ಗ್ರಾಮದ ಮೀನುಕೃಷಿ ಕೊಳಗಳಿಗೆ ಭೇಟಿ ನೀಡಲು ಶನಿವಾರ ಪಟ್ಟಣಕ್ಕೆ ಆಗಮಿಸಿದ್ದ ಸಚಿವರನ್ನು ಸ್ಥಳೀಯ ಗಂಗಾಮತಸ್ಥರು ಸ್ವಾಗತಿಸಿದ ಬಳಿಕ ಸಮುದಾಯದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>ಮೀನುಕೃಷಿ ಕೊಳಗಳ ಮಾಲೀಕರಿಗೆ ವಿದ್ಯುತ್ ಬಿಲ್ ಹೆಚ್ಚಳವಾಗಿರುವ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದರು.</p>.<p>ಶಾಸಕ ಜೆ.ಎನ್. ಗಣೇಶ್ ಮಾತನಾಡಿ, ‘ಪಟ್ಟಣದ ಮೀನುಗಾರರಿಗೆ ಮೀನು ಮಾರುಕಟ್ಟೆ, ಕೋಲ್ಡ್ ಸ್ಟೋರೇಜ್, ಮೀನುಗಾರ ಕುಟುಂಬಗಳಿಗೆ ವಸತಿ ಸೌಲಭ್ಯ ತುಂಬಾ ಅಗತ್ಯವಿದ್ದು, ಸಚಿವರು ಆದ್ಯತೆ ನೀಡಬೇಕಿದೆ’ ಎಂದು ಆಗ್ರಹಿಸಿದರು.</p>.<p>ಗಂಗಾಮತಸ್ಥರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಲಿಗಾರ ನಾಗರಾಜ ಮಾತನಾಡಿ, ಮೀನುಗಾರರಿಗೆ ದೊರೆಯಬೇಕಾದ ಸರ್ಕಾರದ ಸೌಲಭ್ಯಗಳನ್ನು ಅನ್ಯರು ಕಬಳಿಸುತ್ತಿದ್ದಾರೆ. ಸಚಿವರು ಗಮನಹರಿಸಿ ಬೆಸ್ತ, ಗಂಗಾಮತಸ್ಥರಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಗಂಗಾಮತ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನವಿದ್ದು, ಭವನ ನಿರ್ಮಾಣಕ್ಕೆ ₹1ಕೋಟಿ ಮಂಜೂರು ಮಾಡುವಂತೆ ಮನವಿ ಮಾಡಿದರು.</p>.<p>ಸಮಾಜದ ಪ್ರಮುಖರಾದ ಬಿ. ಸಿದ್ದಪ್ಪ, ಕರೇಕಲ್ ಮನೋಹರ, ಅಯ್ಯೋದಿ ವೆಂಕಟೇಶ, ಕಟ್ಟೆ ಸಣ್ಣ ದುರುಗಪ್ಪ, ಎ. ತಾಯಣ್ಣ, ಬಿ. ನೇಣ್ಕಿ ಗಿರೀಶ, ಆಟೊ ರಾಘವೇಂದ್ರ, ಕೆ.ಪ್ರಕಾಶ, ನಡವಿ ಮಂಜುನಾಥ, ಮುಖಂಡ ಬಿ. ನಾರಾಯಣಪ್ಪ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>