ಪ್ರವಾಸಿ ತಾಣವಾಗಿರುವ ಹಂಪಿಗೆ ದೇಶ–ವಿದೇಶಗಳಿಂದ ನಿತ್ಯ ನೂರಾರು ಜನ ಪ್ರವಾಸಿಗರು ಬರುತ್ತಾರೆ. ಎಲ್ಲರೂ ನಗರದ ಮೂಲಕವೇ ಹಾದು ಹೋಗುತ್ತಾರೆ. ಪರಿಸ್ಥಿತಿ ಹೀಗೆಯೇ ಇದ್ದರೆ ನಮ್ಮೂರಿನ ಬಗ್ಗೆ ಅವರು ಏನೆಂದುಕೊಂಡಾರೂ ಎಂಬ ಕನಿಷ್ಠ ಕಳಕಳಿಯು ಜನರಿಗೆ ಇಲ್ಲ. ರಸ್ತೆ ಪಕ್ಕದಲ್ಲಿ ತ್ಯಾಜ್ಯ ಸುರಿಯುತ್ತಿರುವವರ ವಿರುದ್ಧ ನಗರಸಭೆ ಕಠಿಣ ಕ್ರಮ ಜರುಗಿಸಬೇಕು. ಅಂದಾಗ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಚ್ಛತೆ ಎನ್ನುವುದು ಘೋಷಣೆಗಷ್ಟೇ ಸೀಮಿತಗೊಳ್ಳಬಾರದು.
– ರಾಜು, ನವೀನ್, ಬಸವ, ವಿನಯ್, ಸ್ಥಳೀಯ ನಿವಾಸಿಗಳು