ದೀಕ್ಷಾ ಗಾಯಗೊಂಡ ಬಾಲಕಿ. ಬಾಲಕಿಯ ಬೆನ್ನು, ಎಡಗೈ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ’ಅಡುಗೆ ಮನೆಯಲ್ಲಿ ಅನ್ನ ಬಸಿದು ಒಂದು ಬದಿಯಲ್ಲಿ ಗಂಜಿ ಇಟ್ಟಿದ್ದರು. ಈ ಸಂದರ್ಭದಲ್ಲಿ ನೀರು ಕುಡಿಯಲು ಬಾಲಕಿ ಬಂದಿದ್ದಳು. ಸಹಾಯಕಿ ಕೊಟ್ಟ ನೀರು ಕುಡಿದು ಹೋಗುವಾಗ ಬಾಲಕಿ ಗಂಜಿಯಲ್ಲಿ ಬಿದ್ದಿದ್ದಾಳೆ. ಕೂಡಲೇ ಬಾಲಕಿಯ ಪೋಷಕರನ್ನು ಕರೆಸಿಕೊಂಡು,ನಂತರ ಬಾಲಕಿಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ನಿರ್ಲಕ್ಷ್ಯ ತೋರಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಇಲಾಖಾ ವಿಚಾರಣೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು‘ ಎಂದು ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುದೀಪ್ ’ಪ್ರಜಾವಾಣಿ‘ಗೆ ತಿಳಿಸಿದರು.