ಇದೀಗ ಬಿದ್ದ ಹದ ಮಳೆಯಿಂದ ರೈತರ ಮೊಗದಲ್ಲಿ ಹರ್ಷ ಮೂಡಿದ್ದು, ಜೋಳ, ಸಜ್ಜೆ ಸೇರಿದಂತೆ ವಿವಿಧ ಬೆಳೆಗಳ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಇದರ ಜೊತೆಗೆ ಮಕ್ಕೆಜೋಳ, ಶೇಂಗಾ ಬಿತ್ತನೆಗೆ ಭೂಮಿಯನ್ನು ಸಿದ್ಧಪಡಿಸಿಕೊಳ್ಳಲು ರೈತರು ಮುಂದಾಗಿದ್ದಾರೆ. ಈ ಹಿಂದೆ ಬಿದ್ದ ಅಲ್ಪಸ್ವಲ್ಪ ಮಳೆಗೆ ಕೆಲ ರೈತರು ಬಿತ್ತನೆ ಮಾಡಿದ್ದ ಜೋಳಕ್ಕೆ ಮಳೆ ಅನುಕೂಲವಾಗಿದೆ. ಕಡಿಮೆ ತೇವಾಂಶವಿರುವ ಪ್ರದೇಶದಲ್ಲಿ ರೈತರು ಇನ್ನು ಬಿತ್ತನೆ ಮಾಡಲು ಮುಂದಾಗಿಲ್ಲ.