<p><strong>ಹೂವಿನಹಡಗಲಿ:</strong> ಸಂಘಟನೆಗಳ ಹೆಸರಲ್ಲಿ ಕೆಲವರು ಸರ್ಕಾರಿ ಅಧಿಕಾರಿ, ನೌಕರರನ್ನು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನ ಮಾಡಿ, ನೌಕರರ ಘನತೆಗೆ ಧಕ್ಕೆ ತಂದಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಕೊಟ್ರಗೌಡ ಆಗ್ರಹಿಸಿದ್ದಾರೆ.</p>.<p>ಪಟ್ಟಣದಲ್ಲಿ ಗುರುವಾರ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ವರಪ್ಪ ಮಾತನಾಡಿ, ಕೆಲವರ ಕಿರುಕುಳದಿಂದ ಕಚೇರಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಆಗುತ್ತಿಲ್ಲ. ಉತ್ತಮ ಆರ್ಟಿಐ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನೌಕರರ ಸ್ವಾಭಿಮಾನಕ್ಕೆ ಧಕ್ಕೆ ತರುವವರಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನವೀನ್, ಖಜಾನೆ ಅಧಿಕಾರಿ ವಾಗೀಶ, ಬಿಇಒ ಮಹೇಶ ಪೂಜಾರ್, ಶಿಕ್ಷಕರ ಸಂಘದ ಅಧ್ಯಕ್ಷ ವಿ.ಬಿ.ಜಗದೀಶ, ಪಿಡಿಒ ಶಶಿಕಲಾ ಕೊಪ್ಪದ, ನರೇಗಾ ಸಹಾಯಕ ನಿರ್ದೇಶಕ ವೀರಣ್ಣನಾಯ್ಕ ಮಾತನಾಡಿದರು.</p>.<p>ಪ್ರತಿಭಟನೆಯಲ್ಲಿ ಸರ್ಕಾರಿ, ಅರೆ ಸರ್ಕಾರಿ ನೌಕರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ಸಂಘಟನೆಗಳ ಹೆಸರಲ್ಲಿ ಕೆಲವರು ಸರ್ಕಾರಿ ಅಧಿಕಾರಿ, ನೌಕರರನ್ನು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನ ಮಾಡಿ, ನೌಕರರ ಘನತೆಗೆ ಧಕ್ಕೆ ತಂದಿದ್ದಾರೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಕೊಟ್ರಗೌಡ ಆಗ್ರಹಿಸಿದ್ದಾರೆ.</p>.<p>ಪಟ್ಟಣದಲ್ಲಿ ಗುರುವಾರ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ವರಪ್ಪ ಮಾತನಾಡಿ, ಕೆಲವರ ಕಿರುಕುಳದಿಂದ ಕಚೇರಿಯಲ್ಲಿ ನೆಮ್ಮದಿಯಿಂದ ಕೆಲಸ ಮಾಡಲು ಆಗುತ್ತಿಲ್ಲ. ಉತ್ತಮ ಆರ್ಟಿಐ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನೌಕರರ ಸ್ವಾಭಿಮಾನಕ್ಕೆ ಧಕ್ಕೆ ತರುವವರಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನವೀನ್, ಖಜಾನೆ ಅಧಿಕಾರಿ ವಾಗೀಶ, ಬಿಇಒ ಮಹೇಶ ಪೂಜಾರ್, ಶಿಕ್ಷಕರ ಸಂಘದ ಅಧ್ಯಕ್ಷ ವಿ.ಬಿ.ಜಗದೀಶ, ಪಿಡಿಒ ಶಶಿಕಲಾ ಕೊಪ್ಪದ, ನರೇಗಾ ಸಹಾಯಕ ನಿರ್ದೇಶಕ ವೀರಣ್ಣನಾಯ್ಕ ಮಾತನಾಡಿದರು.</p>.<p>ಪ್ರತಿಭಟನೆಯಲ್ಲಿ ಸರ್ಕಾರಿ, ಅರೆ ಸರ್ಕಾರಿ ನೌಕರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>