ಬಳ್ಳಾರಿ: ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಕಂದಗಲ್ಲು ಗ್ರಾಮ ಪಂಚಾಯ್ತಿಗೆ ಸೇರಿದ ಬತ್ತನಹಳ್ಳಿ ಸುತ್ತಮುತ್ತ 117 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ 23ರಂದು ಧರಣಿ ನಡೆಸಲಾಗುವುದು ಎಂದು ಗ್ರಾಮದ ಶ್ರೀ ರಾಮಾಂಜನೇಯ ಸೇವಾ ಸಮಿತಿಯ ಆಂಜಿನಪ್ಪ, ಗುರುಸ್ವಾಮಿ ವಜ್ರಾಲ್ ತಿಳಿಸಿದರು.