<p><strong>ತೋರಣಗಲ್ಲು:</strong> ಹೋಬಳಿಯ ಉಬ್ಬಳಗಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಕೊಠಡಿಗಳು ಹಲವು ವರ್ಷಗಳಿಂದ ಶಿಥಿಲಗೊಂಡಿದ್ದು, ಇನ್ನುಳಿದ ಬಿರುಕು ಬಿಟ್ಟ ಕೊಠಡಿಗಳಲ್ಲೇ ಮಕ್ಕಳು, ಶಿಕ್ಷಕರು ದಿನ ದೂಡುತ್ತಿದ್ದಾರೆ.</p> <p>ಗ್ರಾಮದ ರಸ್ತೆಯ ಪಕ್ಕದಲ್ಲಿ ಚಿಕ್ಕದಾದ ಸ್ಥಳದಲ್ಲಿ ಶಾಲೆ ನಿರ್ಮಿಸಲಾಗಿದ್ದು, ಒಟ್ಟು 8 ಬೋಧನಾ ಕೊಠಡಿಗಳಿವೆ. ಅವುಗಳಲ್ಲಿ ನಾಲ್ಕು ಸಂಪೂರ್ಣ ಶಿಥಿಲಗೊಂಡಿದ್ದರಿಂದ ಬೀಗ ಜಡಿಯಲಾಗಿದೆ.</p> <p>ಶಾಲೆಯ ಗ್ರಂಥಾಲಯ ಕೊಠಡಿ ಸಹಿತ ಇನ್ನುಳಿದ ಮೂರು ಕೊಠಡಿಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡು, ಚಾವಣಿಯ ಸಿಮೆಂಟ್ ಕಾಂಕ್ರೀಟ್ ಕಿತ್ತು, ಕಬ್ಬಿಣದ ಸರಳುಗಳು ಹೊರಚಾಚಿವೆ. ಈ ಕೊಠಡಿಗಳು ಮಳೆಗಾಲದಲ್ಲಿ ನಿರಂತರವಾಗಿ ಸೋರುತ್ತವೆ.</p> <p>ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಬಿಟ್ಟು ಉಳಿದೆಲ್ಲ ಕೊಠಡಿಗಳು ಹಲವಾರು ವರ್ಷಗಳಿಂದ ಪಾಳುಬಿದ್ದು ಅವನತಿಯ ಹಂಚಿಗೆ ತಲುಪಿದ್ದು, ಯಾವ ಕ್ಷಣದಲ್ಲಾದರೂ ಬೀಳಬಹುದು ಎಂಬ ಆತಂಕ ಪಾಲಕರು, ಮಕ್ಕಳು, ಶಿಕ್ಷಕರದ್ದು.</p> <p>1ರಿಂದ 8ನೇ ತರಗತಿ ವರೆಗಿನ ಈ ಶಾಲೆಯಲ್ಲಿ 111 ಮಕ್ಕಳು ಓದುತ್ತಿದ್ದಾರೆ. ಸೂಕ್ತ ಆಟದ ಮೈದಾನದ ಕೊರತೆಯಿದ್ದು, ಮಕ್ಕಳು ಪ್ರತಿ ವರ್ಷ ಕ್ರೀಡಾ ಚಟುವಟಿಕೆಗಳ ಅಭ್ಯಾಸಕ್ಕಾಗಿ ಪರದಾಡುವಂತಾಗಿದೆ.</p> <p>ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ಶೀಘ್ರವಾಗಿ ತೆರವುಗೊಳಿಸಿ ಬೇರೆ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಿಸುವಂತೆ ಸಂಡೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಶಾಸಕರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಜನರು ಅಸಮಾಧಾನ ಹೊರಹಾಕಿದ್ದಾರೆ.</p> <p>ಶೌಚಾಲಯದ ಸೌಲಭ್ಯವೂ ಇಲ್ಲದಿರುವುದರಿಂದ ಶೌಚಕ್ಕಾಗಿ ದೂರದ ಸಾರ್ವಜನಿಕರ ಶೌಚಾಲಯಕ್ಕೆ ತೆರಳಬೇಕು. ರಸ್ತೆಯ ಪಕ್ಕದಲ್ಲೇ ಶಾಲೆ ಇರುವುದರಿಂದ ನಿತ್ಯ ಸಂಚರಿಸುವ ನೂರಾರು ಅದಿರು ಲಾರಿಗಳು ಮಕ್ಕಳ ಪಾಠಕ್ಕೆ ಅಡ್ಡಿ, ಜೀವಕ್ಕೆ ಎರವಾಗಗಿವೆ.</p> <p>‘ಅಧಿಕಾರಿಗಳು, ಜನಪ್ರತಿನಿಧಿಗಳು ಸೂಕ್ತ ಕ್ರಮವಹಿಸಿ ಮೂಲ ಸೌಲಭ್ಯಗಳನ್ನು ಹೊಂದಿದ ಸುಸಜ್ಜಿತ ಶಾಲೆ ನಿರ್ಮಿಸಬೇಕು’ ಎಂದು ಗ್ರಾಮದ ಯುವಕ ಪಂಪಾಪತಿ ಒತ್ತಾಯಿಸಿದರು.</p> <h2><strong>ಸ್ಥಳದ ಅಭಾವ</strong></h2><p>‘ಶಾಲೆಯ ಕೊಠಡಿಗಳು ಶಿಥಿಲಗೊಂಡಿದ್ದರಿಂದ ಮಕ್ಕಳಿಗೆ ತೊಂದರೆಯಾಗಿದೆ. ನೂತನ ಕಟ್ಟಡ ನಿರ್ಮಾಣಕ್ಕಾಗಿ ಅನುದಾನವಿದ್ದು, ಗ್ರಾಮದಲ್ಲಿ ಸ್ಥಳದ ಅಭಾವದಿಂದ ಶಾಲೆಯನ್ನು ನಿರ್ಮಿಸಲು ಆಗುತ್ತಿಲ್ಲ. ಜನರು ಶಾಲೆಗೆ ಸ್ಥಳ ಒದಗಿಸಿದರೆ ತ್ವರಿತವಾಗಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಸಂಡೂರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಆರ್.ಅಕ್ಕಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋರಣಗಲ್ಲು:</strong> ಹೋಬಳಿಯ ಉಬ್ಬಳಗಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಕೊಠಡಿಗಳು ಹಲವು ವರ್ಷಗಳಿಂದ ಶಿಥಿಲಗೊಂಡಿದ್ದು, ಇನ್ನುಳಿದ ಬಿರುಕು ಬಿಟ್ಟ ಕೊಠಡಿಗಳಲ್ಲೇ ಮಕ್ಕಳು, ಶಿಕ್ಷಕರು ದಿನ ದೂಡುತ್ತಿದ್ದಾರೆ.</p> <p>ಗ್ರಾಮದ ರಸ್ತೆಯ ಪಕ್ಕದಲ್ಲಿ ಚಿಕ್ಕದಾದ ಸ್ಥಳದಲ್ಲಿ ಶಾಲೆ ನಿರ್ಮಿಸಲಾಗಿದ್ದು, ಒಟ್ಟು 8 ಬೋಧನಾ ಕೊಠಡಿಗಳಿವೆ. ಅವುಗಳಲ್ಲಿ ನಾಲ್ಕು ಸಂಪೂರ್ಣ ಶಿಥಿಲಗೊಂಡಿದ್ದರಿಂದ ಬೀಗ ಜಡಿಯಲಾಗಿದೆ.</p> <p>ಶಾಲೆಯ ಗ್ರಂಥಾಲಯ ಕೊಠಡಿ ಸಹಿತ ಇನ್ನುಳಿದ ಮೂರು ಕೊಠಡಿಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡು, ಚಾವಣಿಯ ಸಿಮೆಂಟ್ ಕಾಂಕ್ರೀಟ್ ಕಿತ್ತು, ಕಬ್ಬಿಣದ ಸರಳುಗಳು ಹೊರಚಾಚಿವೆ. ಈ ಕೊಠಡಿಗಳು ಮಳೆಗಾಲದಲ್ಲಿ ನಿರಂತರವಾಗಿ ಸೋರುತ್ತವೆ.</p> <p>ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಬಿಟ್ಟು ಉಳಿದೆಲ್ಲ ಕೊಠಡಿಗಳು ಹಲವಾರು ವರ್ಷಗಳಿಂದ ಪಾಳುಬಿದ್ದು ಅವನತಿಯ ಹಂಚಿಗೆ ತಲುಪಿದ್ದು, ಯಾವ ಕ್ಷಣದಲ್ಲಾದರೂ ಬೀಳಬಹುದು ಎಂಬ ಆತಂಕ ಪಾಲಕರು, ಮಕ್ಕಳು, ಶಿಕ್ಷಕರದ್ದು.</p> <p>1ರಿಂದ 8ನೇ ತರಗತಿ ವರೆಗಿನ ಈ ಶಾಲೆಯಲ್ಲಿ 111 ಮಕ್ಕಳು ಓದುತ್ತಿದ್ದಾರೆ. ಸೂಕ್ತ ಆಟದ ಮೈದಾನದ ಕೊರತೆಯಿದ್ದು, ಮಕ್ಕಳು ಪ್ರತಿ ವರ್ಷ ಕ್ರೀಡಾ ಚಟುವಟಿಕೆಗಳ ಅಭ್ಯಾಸಕ್ಕಾಗಿ ಪರದಾಡುವಂತಾಗಿದೆ.</p> <p>ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ಶೀಘ್ರವಾಗಿ ತೆರವುಗೊಳಿಸಿ ಬೇರೆ ಸ್ಥಳದಲ್ಲಿ ನೂತನ ಕಟ್ಟಡ ನಿರ್ಮಿಸುವಂತೆ ಸಂಡೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ, ಶಾಸಕರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಜನರು ಅಸಮಾಧಾನ ಹೊರಹಾಕಿದ್ದಾರೆ.</p> <p>ಶೌಚಾಲಯದ ಸೌಲಭ್ಯವೂ ಇಲ್ಲದಿರುವುದರಿಂದ ಶೌಚಕ್ಕಾಗಿ ದೂರದ ಸಾರ್ವಜನಿಕರ ಶೌಚಾಲಯಕ್ಕೆ ತೆರಳಬೇಕು. ರಸ್ತೆಯ ಪಕ್ಕದಲ್ಲೇ ಶಾಲೆ ಇರುವುದರಿಂದ ನಿತ್ಯ ಸಂಚರಿಸುವ ನೂರಾರು ಅದಿರು ಲಾರಿಗಳು ಮಕ್ಕಳ ಪಾಠಕ್ಕೆ ಅಡ್ಡಿ, ಜೀವಕ್ಕೆ ಎರವಾಗಗಿವೆ.</p> <p>‘ಅಧಿಕಾರಿಗಳು, ಜನಪ್ರತಿನಿಧಿಗಳು ಸೂಕ್ತ ಕ್ರಮವಹಿಸಿ ಮೂಲ ಸೌಲಭ್ಯಗಳನ್ನು ಹೊಂದಿದ ಸುಸಜ್ಜಿತ ಶಾಲೆ ನಿರ್ಮಿಸಬೇಕು’ ಎಂದು ಗ್ರಾಮದ ಯುವಕ ಪಂಪಾಪತಿ ಒತ್ತಾಯಿಸಿದರು.</p> <h2><strong>ಸ್ಥಳದ ಅಭಾವ</strong></h2><p>‘ಶಾಲೆಯ ಕೊಠಡಿಗಳು ಶಿಥಿಲಗೊಂಡಿದ್ದರಿಂದ ಮಕ್ಕಳಿಗೆ ತೊಂದರೆಯಾಗಿದೆ. ನೂತನ ಕಟ್ಟಡ ನಿರ್ಮಾಣಕ್ಕಾಗಿ ಅನುದಾನವಿದ್ದು, ಗ್ರಾಮದಲ್ಲಿ ಸ್ಥಳದ ಅಭಾವದಿಂದ ಶಾಲೆಯನ್ನು ನಿರ್ಮಿಸಲು ಆಗುತ್ತಿಲ್ಲ. ಜನರು ಶಾಲೆಗೆ ಸ್ಥಳ ಒದಗಿಸಿದರೆ ತ್ವರಿತವಾಗಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಸಂಡೂರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಆರ್.ಅಕ್ಕಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>