<p><strong>ಹಗರಿಬೊಮ್ಮನಹಳ್ಳಿ</strong>: ಎಪಿಎಂಸಿ ಮಾಜಿ ಉಪಾಧ್ಯಕ್ಷ, ಹಾಲಿ ನಿರ್ದೇಶಕ ತಾಲ್ಲೂಕಿನ ವಲ್ಲಭಾಪುರ ಗ್ರಾಮದ ಬಿ.ಹುಲುಗಪ್ಪ ಮತಗಟ್ಟೆಗೆ ತೆರಳಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದನ್ನು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ. ಗುರುತಿನ ಚೀಟಿಯೊಂದಿಗೆ ತೆರಳಿದ್ದ ಅವರು ಮತಗಟ್ಟೆಯಲ್ಲಿ ಅಧಿಕಾರಿಗಳುನಿಮ್ಮ ಹೆಸರು ತೆಗೆಯಲಾಗಿದೆ ಎಂದು ಹೇಳಿದರು.</p>.<p>ಈಚೆಗೆ ಹುಲುಗಪ್ಪ ಅವರ ತಂದೆ ಬಟಾರಿ ಹುಲುಗಪ್ಪ ಮೃತರಾಗಿದ್ದರು, ಆದರೆ ತಂದೆಯ ಬದಲಾಗಿ ಮಗನ ಹೆಸರನ್ನು ಡಿಲಿಟ್ ಮಾಡಲಾಗಿದೆ ಎಂದು ವಲ್ಲಭಾಪುರ ಬಿಎಲ್ಒ ರಾಮಪ್ಪ ತಿಳಿಸಿದರು. ಈ ಕುರಿತಂತೆ ತಾಲ್ಲೂಕು ಕಚೇರಿಗೆ ಮಾಹಿತಿ ನೀಡಲಾಗಿತ್ತು, ಆದರೂ ಬದುಕಿರುವವರ ಹೆಸರನ್ನು ತೆಗೆಯಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಹೊಸ ಗ್ರಾಮ ಪಂಚಾಯ್ತಿಯ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲು ತಾಲ್ಲೂಕು ಆಡಳಿತ ಮತದಾನ ಮಾಡುವುದಕ್ಕೆ ವಂಚಿತರನ್ನಾಗಿ ಮಾಡಿದೆ ಎಂದು ಮಾರುತೆಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಕೆಲಕಾಲ ಮತದಾನ ಕೇಂದ್ರದಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಕೋರಿದರು.</p>.<p>ಗ್ರಾಮದ ತಾರಳ್ಳಿ ದ್ಯಾಮವ್ವ ಎನ್ನುವವರ ಹೆಸರನ್ನೂ ತೆಗೆಯಲಾಗಿದೆ. ಇವರ ಪತಿ ದುರುಗಪ್ಪ ನಿಧನರಾಗಿದ್ದರು. ಪತಿಯ ಬದಲಾಗಿ ಪತ್ನಿಯ ಹೆಸರನ್ನು ತೆಗೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ಎಪಿಎಂಸಿ ಮಾಜಿ ಉಪಾಧ್ಯಕ್ಷ, ಹಾಲಿ ನಿರ್ದೇಶಕ ತಾಲ್ಲೂಕಿನ ವಲ್ಲಭಾಪುರ ಗ್ರಾಮದ ಬಿ.ಹುಲುಗಪ್ಪ ಮತಗಟ್ಟೆಗೆ ತೆರಳಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದನ್ನು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ. ಗುರುತಿನ ಚೀಟಿಯೊಂದಿಗೆ ತೆರಳಿದ್ದ ಅವರು ಮತಗಟ್ಟೆಯಲ್ಲಿ ಅಧಿಕಾರಿಗಳುನಿಮ್ಮ ಹೆಸರು ತೆಗೆಯಲಾಗಿದೆ ಎಂದು ಹೇಳಿದರು.</p>.<p>ಈಚೆಗೆ ಹುಲುಗಪ್ಪ ಅವರ ತಂದೆ ಬಟಾರಿ ಹುಲುಗಪ್ಪ ಮೃತರಾಗಿದ್ದರು, ಆದರೆ ತಂದೆಯ ಬದಲಾಗಿ ಮಗನ ಹೆಸರನ್ನು ಡಿಲಿಟ್ ಮಾಡಲಾಗಿದೆ ಎಂದು ವಲ್ಲಭಾಪುರ ಬಿಎಲ್ಒ ರಾಮಪ್ಪ ತಿಳಿಸಿದರು. ಈ ಕುರಿತಂತೆ ತಾಲ್ಲೂಕು ಕಚೇರಿಗೆ ಮಾಹಿತಿ ನೀಡಲಾಗಿತ್ತು, ಆದರೂ ಬದುಕಿರುವವರ ಹೆಸರನ್ನು ತೆಗೆಯಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಹೊಸ ಗ್ರಾಮ ಪಂಚಾಯ್ತಿಯ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಲು ತಾಲ್ಲೂಕು ಆಡಳಿತ ಮತದಾನ ಮಾಡುವುದಕ್ಕೆ ವಂಚಿತರನ್ನಾಗಿ ಮಾಡಿದೆ ಎಂದು ಮಾರುತೆಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಕೆಲಕಾಲ ಮತದಾನ ಕೇಂದ್ರದಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಕೋರಿದರು.</p>.<p>ಗ್ರಾಮದ ತಾರಳ್ಳಿ ದ್ಯಾಮವ್ವ ಎನ್ನುವವರ ಹೆಸರನ್ನೂ ತೆಗೆಯಲಾಗಿದೆ. ಇವರ ಪತಿ ದುರುಗಪ್ಪ ನಿಧನರಾಗಿದ್ದರು. ಪತಿಯ ಬದಲಾಗಿ ಪತ್ನಿಯ ಹೆಸರನ್ನು ತೆಗೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>