<p><strong>ಸಿರುಗುಪ್ಪ:</strong> ತಾಲ್ಲೂಕಿನ ಹಚ್ಚೋಳ್ಳಿ ಗ್ರಾಮದ ಬಸ್ ನಿಲ್ದಾಣದಿಂದ ಗ್ರಾಮದೊಳಗೆ ಹೋಗುವ ಮಣ್ಣಿನ ಕಚ್ಚಾ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಮಳೆಗಾಲಪೂರ್ತಿ ಕೆಸರು ಗದ್ದೆಯಾಗಿದರಿಂದ ಸಾರ್ವಜನಿಕರು ನರಕಯಾತನೆ ಅನುಭವಿಸುವ ದುಃಸ್ಥಿತಿ ನಿರ್ಮಾಣವಾಗಿದೆ.</p>.<p>ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮದೊಳಗಿನ ರಸ್ತೆಗಳ ಸ್ಥಿತಿ ತುಂಬಾ ಬಿಗಡಾಯಿಸಿದೆ. ಗ್ರಾಮದ ಮುಖ್ಯರಸ್ತೆಯಿಂದ ಬಸ್ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸ್ಥಿತಿ ಹೇಳತೀರದು. ರಸ್ತೆಯ ಬದಿಯಲ್ಲಿ ತಿಪ್ಪೇ ಗುಂಡಿಗಳನ್ನು ಹಾಕಿದ್ದು, ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯೂ ಇಲ್ಲ.</p>.<p>ಗ್ರಾಮಸ್ಥರು ತಮ್ಮ ಮನೆಯಿಂದ ಬಸ್ ನಿಲ್ದಾಣ ತಲುಪಲು ಸಾಹಸ ಪಡಬೇಕಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ಗ್ರಾಮಸ್ಥರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.</p>.<p>ಹೊಸ ಸಿ.ಸಿ ರಸ್ತೆ ಅಥವಾ ಡಾಂಬರ್ ರಸ್ತೆ ನಿರ್ಮಾಣ ಮಾಡಿ ಮಳೆನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.</p>.<p>‘ಗ್ರಾಮದ ಮುಖ್ಯರಸ್ತೆಯಲ್ಲಿ ಮಳೆನೀರು ಸಂಗ್ರಹವಾಗುತ್ತದೆ ಎನ್ನುವ ಕಾರಣಕ್ಕೆ ಮಣ್ಣು ತಂದು ಸುರಿಯಲಾಗಿದೆ. ರಸ್ತೆಯ ಅಕ್ಕಪಕ್ಕದಲ್ಲಿ ತಿಪ್ಪೆ ರಾಶಿ ಇರುವುದರಿಂದ ಮಳೆನೀರು ಸರಾಗವಾಗಿ ಹರಿದು ಹೋಗುವುದಿಲ್ಲ. ಮುಂದಿನ ದಿನದಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಗುವುದು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ತಿಳಿಸಿದರು.</p>.<p>‘ಹಚೋಳ್ಳಿ ಗ್ರಾಮದ ರಸ್ತೆಯ ಅವ್ಯವಸ್ಥೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪವನಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ತಾಲ್ಲೂಕಿನ ಹಚ್ಚೋಳ್ಳಿ ಗ್ರಾಮದ ಬಸ್ ನಿಲ್ದಾಣದಿಂದ ಗ್ರಾಮದೊಳಗೆ ಹೋಗುವ ಮಣ್ಣಿನ ಕಚ್ಚಾ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಮಳೆಗಾಲಪೂರ್ತಿ ಕೆಸರು ಗದ್ದೆಯಾಗಿದರಿಂದ ಸಾರ್ವಜನಿಕರು ನರಕಯಾತನೆ ಅನುಭವಿಸುವ ದುಃಸ್ಥಿತಿ ನಿರ್ಮಾಣವಾಗಿದೆ.</p>.<p>ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮದೊಳಗಿನ ರಸ್ತೆಗಳ ಸ್ಥಿತಿ ತುಂಬಾ ಬಿಗಡಾಯಿಸಿದೆ. ಗ್ರಾಮದ ಮುಖ್ಯರಸ್ತೆಯಿಂದ ಬಸ್ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸ್ಥಿತಿ ಹೇಳತೀರದು. ರಸ್ತೆಯ ಬದಿಯಲ್ಲಿ ತಿಪ್ಪೇ ಗುಂಡಿಗಳನ್ನು ಹಾಕಿದ್ದು, ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯೂ ಇಲ್ಲ.</p>.<p>ಗ್ರಾಮಸ್ಥರು ತಮ್ಮ ಮನೆಯಿಂದ ಬಸ್ ನಿಲ್ದಾಣ ತಲುಪಲು ಸಾಹಸ ಪಡಬೇಕಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ಗ್ರಾಮಸ್ಥರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.</p>.<p>ಹೊಸ ಸಿ.ಸಿ ರಸ್ತೆ ಅಥವಾ ಡಾಂಬರ್ ರಸ್ತೆ ನಿರ್ಮಾಣ ಮಾಡಿ ಮಳೆನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.</p>.<p>‘ಗ್ರಾಮದ ಮುಖ್ಯರಸ್ತೆಯಲ್ಲಿ ಮಳೆನೀರು ಸಂಗ್ರಹವಾಗುತ್ತದೆ ಎನ್ನುವ ಕಾರಣಕ್ಕೆ ಮಣ್ಣು ತಂದು ಸುರಿಯಲಾಗಿದೆ. ರಸ್ತೆಯ ಅಕ್ಕಪಕ್ಕದಲ್ಲಿ ತಿಪ್ಪೆ ರಾಶಿ ಇರುವುದರಿಂದ ಮಳೆನೀರು ಸರಾಗವಾಗಿ ಹರಿದು ಹೋಗುವುದಿಲ್ಲ. ಮುಂದಿನ ದಿನದಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಗುವುದು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ತಿಳಿಸಿದರು.</p>.<p>‘ಹಚೋಳ್ಳಿ ಗ್ರಾಮದ ರಸ್ತೆಯ ಅವ್ಯವಸ್ಥೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪವನಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>