‘ರಾಯಚೂರಿನ ಯಾಪಲದಿನ್ನಿ ಠಾಣೆಯಿಂದ ಕೆಲಸ ಆರಂಭಿಸಿದ ನಾನು ರಾಜ್ಯದ ಸುಮಾರು 37 ಕಡೆಗಳಲ್ಲಿ ಕೆಲಸ ನಿರ್ವಹಿಸಿದ್ದೇನೆ. ಕೀರ್ತಿ, ಅಪಕೀರ್ತಿ ಎಲ್ಲವನ್ನೂ ಇಲಾಖೆಯಲ್ಲಿ ಪಡೆದಿರುವೆ. ಪಿಎಸ್ಐ ಇದ್ದಾಗ ಎರಡು ಸಲ ರಾಜೀನಾಮೆ ಕೊಟ್ಟಿದ್ದೆ. ರಾಜೀನಾಮೆ ನೀಡಿ ಓಡಿ ಹೋಗುವುದು ಹೇಡಿಗಳ ಲಕ್ಷಣವೆಂದು ತಿಳಿದು ಆ ವಿಚಾರ ಕೈಬಿಟ್ಟಿದ್ದೆ. ಆದರೆ, ಐಜಿಪಿ ಅವರು ರಾಜೀನಾಮೆ ನೀಡುವಂತೆ ಸೂಚಿಸಿದ್ದರಿಂದ ಹಂಪಿಯಲ್ಲಿ ನನ್ನ ಕೆಲಸ ಮುಕ್ತಾಯಗೊಳಿಸಲು ನಿರ್ಧರಿಸಿ ಈ ತೀರ್ಮಾನಕ್ಕೆ ಬಂದಿರುವೆ’ ಎಂದು ಶುಕ್ರವಾರ ಅವರು ಸಲ್ಲಿಸಿರುವ ರಾಜೀನಾಮೆಯಲ್ಲಿ ತಿಳಿಸಿದ್ದಾರೆ.