ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಸಮಸ್ಯೆಗೂ ಕಾರಣವಾಗಿದೆ. ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಿರುವುದರಿಂದ ವಿಶ್ವಪ್ರಸಿದ್ಧ ಹಂಪಿಯ ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಸಮೀಪದ ಸ್ನಾನಘಟ್ಟ, ಚಕ್ರತೀರ್ಥ, ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಸ್ಮಾರಕಗಳು ಮುಳುಗಡೆಯಾಗಿವೆ.