ಕಳೆದ 2018ರ ನವೆಂಬರ್ ಮೊದಲ 3,4,5 ರಂದು ಪ್ರತಿ ವರ್ಷದಂತೆ ನಡೆಯಬೇಕಿದ್ದ ಉತ್ಸವವನ್ನು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರಿಂದ ತೆರವಾಗಿದ್ದ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಅಂದಿನಿಂದ ಹಲವಾರು ಕನ್ನಡಪರ ಸಂಘಟನೆಗಳು ಮತ್ತು ಕಲಾವಿದರು ಅನೇಕ ಹೋರಾಟಗಳನ್ನು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.