<p><strong>ಹೂವಿನಹಡಗಲಿ: </strong>ತಾಲ್ಲೂಕಿನ ಮದಲಗಟ್ಟಿ ಕ್ಷೇತ್ರದಲ್ಲಿ ಭಾನುವಾರ ಸಂಜೆ ಆಂಜನೇಯ ಸ್ವಾಮಿಯ ರಥೋತ್ಸವ ವೈಭವದಿಂದ ಜರುಗಿತು.</p>.<p>ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ ‘ಜೈ ಶ್ರೀರಾಮ್ … ವೆಂಕಟರಮಣ ಗೋವಿಂದ... ಎಂಬ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಪ್ರಾರಂಭವಾಯಿತು. ರಥ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಬಾಳೆಹಣ್ಣು, ಎಸೆದು ಭಕ್ತಿ ಸಮರ್ಪಿಸಿದರು.</p>.<p>ಹೂವಿನಹಡಗಲಿ, ಮುಂಡರಗಿ ತಾಲ್ಲೂಕುಗಳ ಅಪಾರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಬೆಳಗ್ಗೆ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅರ್ಚಕರು ಪೂಜಾ ವಿಧಿವಿಧಾನ ಪೂರೈಸಿದ ಬಳಿಕ ಅಗ್ನಿಕುಂಡ ಜರುಗಿತು.</p>.<p>ರಥೋತ್ಸವ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ, ವಾಯುಸ್ತುತಿ ಪುನಃಶ್ಚರಣ, ಅಷ್ಟೋತ್ತರ ನೆರವೇರಿತು. ದೇವಸ್ಥಾನ ಸಮಿತಿಯವರು, ಪ್ರಾಣರಾಜ ಉತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ: </strong>ತಾಲ್ಲೂಕಿನ ಮದಲಗಟ್ಟಿ ಕ್ಷೇತ್ರದಲ್ಲಿ ಭಾನುವಾರ ಸಂಜೆ ಆಂಜನೇಯ ಸ್ವಾಮಿಯ ರಥೋತ್ಸವ ವೈಭವದಿಂದ ಜರುಗಿತು.</p>.<p>ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ ‘ಜೈ ಶ್ರೀರಾಮ್ … ವೆಂಕಟರಮಣ ಗೋವಿಂದ... ಎಂಬ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಪ್ರಾರಂಭವಾಯಿತು. ರಥ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಬಾಳೆಹಣ್ಣು, ಎಸೆದು ಭಕ್ತಿ ಸಮರ್ಪಿಸಿದರು.</p>.<p>ಹೂವಿನಹಡಗಲಿ, ಮುಂಡರಗಿ ತಾಲ್ಲೂಕುಗಳ ಅಪಾರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು. ಬೆಳಗ್ಗೆ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅರ್ಚಕರು ಪೂಜಾ ವಿಧಿವಿಧಾನ ಪೂರೈಸಿದ ಬಳಿಕ ಅಗ್ನಿಕುಂಡ ಜರುಗಿತು.</p>.<p>ರಥೋತ್ಸವ ಅಂಗವಾಗಿ ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ, ವಾಯುಸ್ತುತಿ ಪುನಃಶ್ಚರಣ, ಅಷ್ಟೋತ್ತರ ನೆರವೇರಿತು. ದೇವಸ್ಥಾನ ಸಮಿತಿಯವರು, ಪ್ರಾಣರಾಜ ಉತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>