ಕೆರೆ ಸಂರಕ್ಷಣಾ ಮತ್ತು ಅಭಿವೃದ್ಧಿ ಕಾಯ್ದೆ ಸೆಕ್ಷನ್ 12ರ ಪ್ರಕಾರ ಕೆರೆ ಪ್ರದೇಶದಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ. ಅಂತಹ ಪ್ರದೇಶ ಅತೀ ಕ್ರಮಣ ಮಾಡಿಕೊಂಡವರಿಗೆ, ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳನ್ನು ನಿರ್ಮಿಸಿಕೊಡುತ್ತಿದೆ. ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಮಂಡಳಿಯ ಎಂಜಿನಿಯರ್ ಶಿವಕುಮಾರ ಮತ್ತು ಖಾಸಗಿ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.