<p><strong>ಮರಿಯಮ್ಮನಹಳ್ಳಿ</strong>: ಪಟ್ಟಣದ ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ದಿನವಿಡೀ ಬಿಟ್ಟು ಬಿಡದೇ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು.</p>.<p>ಬೆಳಿಗ್ಗೆ 10ಕ್ಕೆ ಆರಂಭವಾದ ಮಳೆ ಒಂದು ತಾಸಿಗೂ ಹೆಚ್ಚು ಹೊತ್ತು ಧಾರಾಕಾರವಾಗಿ ಸುರಿಯಿತು. ನಂತರ ಜಿಟಿಜಿಟಿ ಮಳೆ ಹತ್ತಿಕೊಂಡಿತು. ಮಧ್ಯಾಹ್ನ ಮತ್ತೆ ಒಂದು ತಾಸಿಗೂ ಹೆಚ್ಚು ಕಾಲ ಸುರಿದ ಮಳೆ, ಸಂಜೆ ತನಕ ಬಿಟ್ಟುಬಿಡದೇ ಸುರಿಯಿತು.</p>.<p>ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಸಮೀಪದ ಬ್ಯಾಲಕುಂದಿ ಗ್ರಾಮದ ಬಳಿ ಸಂಜೆ 6ರ ಸುಮಾರಿಗೆ ಬಂದ ಭಾರಿ ಹಳ್ಳದಿಂದಾಗಿ ಪಟ್ಟಣದಿಂದ ಯಶವಂತನಗರ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಎರಡು ತಾಸಿಗೂ ಹೆಚ್ಚು ಕಾಲ ಸ್ಥಗಿತಗೊಂಡಿತು.</p>.<p>ಪಟ್ಟಣದಿಂದ ಯಶವಂತನಗರ, ಸಂಡೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದಾಗಿದ್ದರಿಂದ, ಎರಡೂ ಕಡೆ ವಾಹನ ಸವಾರರು, ರೈತರು ಹಾಗೂ ಜಾನುವಾರು ಪರದಾಡುವಂತಾಯಿತು.</p>.<p>ದಿನವಿಡೀ ಹತ್ತಿಕೊಂಡ ಮಳೆ ಒಂದೆಡೆಯಾದರೆ, ಇನ್ನೊಂದೆಡೆ ಹೊಸಪೇಟೆಯಲ್ಲಿ ನಡೆದ ಸಮಾವೇಶದಿಂದಾಗಿ ಪಟ್ಟಣದಲ್ಲಿ ಹಾದುಹೋದ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ-25 ಸೇರಿದಂತೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಪಾರ ಸಂಖ್ಯೆಯಲ್ಲಿ ಬಸ್ಗಳ ಸಂಚಾರ ದಟ್ಟಣೆಯಿಂದಾಗಿ ಬೆಳಿಗ್ಗೆಯಿಂದ ಸಂಜೆಯವರೆಗೆ ಆಗಾಗ ಟ್ರಾಫಿಕ್ ಜಾಮ್ ಉಂಟಾಗಿ ಜನ ತೊಂದರೆ ಪಡುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ</strong>: ಪಟ್ಟಣದ ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ದಿನವಿಡೀ ಬಿಟ್ಟು ಬಿಡದೇ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು.</p>.<p>ಬೆಳಿಗ್ಗೆ 10ಕ್ಕೆ ಆರಂಭವಾದ ಮಳೆ ಒಂದು ತಾಸಿಗೂ ಹೆಚ್ಚು ಹೊತ್ತು ಧಾರಾಕಾರವಾಗಿ ಸುರಿಯಿತು. ನಂತರ ಜಿಟಿಜಿಟಿ ಮಳೆ ಹತ್ತಿಕೊಂಡಿತು. ಮಧ್ಯಾಹ್ನ ಮತ್ತೆ ಒಂದು ತಾಸಿಗೂ ಹೆಚ್ಚು ಕಾಲ ಸುರಿದ ಮಳೆ, ಸಂಜೆ ತನಕ ಬಿಟ್ಟುಬಿಡದೇ ಸುರಿಯಿತು.</p>.<p>ಹೋಬಳಿ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಸಮೀಪದ ಬ್ಯಾಲಕುಂದಿ ಗ್ರಾಮದ ಬಳಿ ಸಂಜೆ 6ರ ಸುಮಾರಿಗೆ ಬಂದ ಭಾರಿ ಹಳ್ಳದಿಂದಾಗಿ ಪಟ್ಟಣದಿಂದ ಯಶವಂತನಗರ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಎರಡು ತಾಸಿಗೂ ಹೆಚ್ಚು ಕಾಲ ಸ್ಥಗಿತಗೊಂಡಿತು.</p>.<p>ಪಟ್ಟಣದಿಂದ ಯಶವಂತನಗರ, ಸಂಡೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದಾಗಿದ್ದರಿಂದ, ಎರಡೂ ಕಡೆ ವಾಹನ ಸವಾರರು, ರೈತರು ಹಾಗೂ ಜಾನುವಾರು ಪರದಾಡುವಂತಾಯಿತು.</p>.<p>ದಿನವಿಡೀ ಹತ್ತಿಕೊಂಡ ಮಳೆ ಒಂದೆಡೆಯಾದರೆ, ಇನ್ನೊಂದೆಡೆ ಹೊಸಪೇಟೆಯಲ್ಲಿ ನಡೆದ ಸಮಾವೇಶದಿಂದಾಗಿ ಪಟ್ಟಣದಲ್ಲಿ ಹಾದುಹೋದ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ-25 ಸೇರಿದಂತೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಅಪಾರ ಸಂಖ್ಯೆಯಲ್ಲಿ ಬಸ್ಗಳ ಸಂಚಾರ ದಟ್ಟಣೆಯಿಂದಾಗಿ ಬೆಳಿಗ್ಗೆಯಿಂದ ಸಂಜೆಯವರೆಗೆ ಆಗಾಗ ಟ್ರಾಫಿಕ್ ಜಾಮ್ ಉಂಟಾಗಿ ಜನ ತೊಂದರೆ ಪಡುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>