<p><strong>ಹೊಸಪೇಟೆ:</strong> ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ಅಪಘಾತಕ್ಕೆ ಅತಿ ವೇಗದಲ್ಲಿ ಕಾರು ಓಡಿಸಿದ್ದೆ ಪ್ರಮುಖ ಕಾರಣ ಎಂಬುದು ರಾಷ್ಟ್ರೀಯ ಹೆದ್ದಾರಿ 50ರ ಬಳಿಯ ಡಾಬಾದ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳಿಂದ ತಿಳಿದು ಬಂದಿದೆ.</p>.<p>ಫೆಬ್ರುವರಿ 10ರಂದು ಮಧ್ಯಾಹ್ನ 3.15ಕ್ಕೆ ಕೆಂಪು ಬಣ್ಣದ ಬೆಂಜ್ ಕಾರು ರಾಷ್ಟ್ರೀಯ ಹೆದ್ದಾರಿ 50ರ ಮೂಲಕ ನಗರದಿಂದ ಬೆಂಗಳೂರಿಗೆ ಹೊರಟಿತ್ತು. ಈ ಕಾರು ಗಂಟೆಗೆ ಸುಮಾರು 120ರಿಂದ 130 ಕಿ.ಮೀ ವೇಗದಲ್ಲಿ ಹೋಗುತ್ತಿತ್ತು ಎನ್ನಲಾಗಿದೆ.</p>.<p>ಸಿಸಿಟಿವಿ ವ್ಯಾಪ್ತಿಯಲ್ಲಿ ಹೆದ್ದಾರಿ ಮೂಲಕ ಕಾರು ಕ್ಷಣಾರ್ಧದಲ್ಲಿ ಹಾದು ಹೋಗಿರುವ ದೃಶ್ಯವಷ್ಟೇ ದಾಖಲಾಗಿದೆ. ಅದಾದ ಕೆಲ ನಿಮಿಷಗಳ ಬಳಿಕ ಕಾರಿನಲ್ಲಿ ಗಾಯಗೊಂಡವರು ಜೀಪಿನಲ್ಲಿ ನಗರದ ಕಡೆಗೆ ಹೋಗುತ್ತಿರುವ ದೃಶ್ಯವೂ ಸೆರೆಯಾಗಿದೆ.</p>.<p>ವೇಗದಿಂದ ಬಂದ ಕಾರು, ಹೆದ್ದಾರಿ ಬದಿಯ ಚಹಾದಂಗಡಿ ಬಳಿ ನಿಂತಿದ್ದ ಮರಿಯಮ್ಮನಹಳ್ಳಿ ತಾಂಡಾದ ರವಿ ನಾಯ್ಕಗೆ (16) ಡಿಕ್ಕಿ ಹೊಡೆದಿದೆ. ರವಿ ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಸಚಿನ್ (27) ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದರು.</p>.<p>ಕಾರು ಚಾಲಕ ರಾಹುಲ್, ಕಾರಿನಲ್ಲಿದ್ದ ರಾಕೇಶ್, ಶಿವಕುಮಾರ ಹಾಗೂ ವರುಣ್ಗೆ ಗಾಯಗಳಾಗಿದ್ದವು. ರಾಹುಲ್ನನ್ನು ಇತ್ತೀಚೆಗೆ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರಾಜ್ಯದ ಪ್ರಭಾವಿ ಸಚಿವರ ಮಗನೇ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾಗಿದ್ದಾನೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ಅಪಘಾತಕ್ಕೆ ಅತಿ ವೇಗದಲ್ಲಿ ಕಾರು ಓಡಿಸಿದ್ದೆ ಪ್ರಮುಖ ಕಾರಣ ಎಂಬುದು ರಾಷ್ಟ್ರೀಯ ಹೆದ್ದಾರಿ 50ರ ಬಳಿಯ ಡಾಬಾದ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳಿಂದ ತಿಳಿದು ಬಂದಿದೆ.</p>.<p>ಫೆಬ್ರುವರಿ 10ರಂದು ಮಧ್ಯಾಹ್ನ 3.15ಕ್ಕೆ ಕೆಂಪು ಬಣ್ಣದ ಬೆಂಜ್ ಕಾರು ರಾಷ್ಟ್ರೀಯ ಹೆದ್ದಾರಿ 50ರ ಮೂಲಕ ನಗರದಿಂದ ಬೆಂಗಳೂರಿಗೆ ಹೊರಟಿತ್ತು. ಈ ಕಾರು ಗಂಟೆಗೆ ಸುಮಾರು 120ರಿಂದ 130 ಕಿ.ಮೀ ವೇಗದಲ್ಲಿ ಹೋಗುತ್ತಿತ್ತು ಎನ್ನಲಾಗಿದೆ.</p>.<p>ಸಿಸಿಟಿವಿ ವ್ಯಾಪ್ತಿಯಲ್ಲಿ ಹೆದ್ದಾರಿ ಮೂಲಕ ಕಾರು ಕ್ಷಣಾರ್ಧದಲ್ಲಿ ಹಾದು ಹೋಗಿರುವ ದೃಶ್ಯವಷ್ಟೇ ದಾಖಲಾಗಿದೆ. ಅದಾದ ಕೆಲ ನಿಮಿಷಗಳ ಬಳಿಕ ಕಾರಿನಲ್ಲಿ ಗಾಯಗೊಂಡವರು ಜೀಪಿನಲ್ಲಿ ನಗರದ ಕಡೆಗೆ ಹೋಗುತ್ತಿರುವ ದೃಶ್ಯವೂ ಸೆರೆಯಾಗಿದೆ.</p>.<p>ವೇಗದಿಂದ ಬಂದ ಕಾರು, ಹೆದ್ದಾರಿ ಬದಿಯ ಚಹಾದಂಗಡಿ ಬಳಿ ನಿಂತಿದ್ದ ಮರಿಯಮ್ಮನಹಳ್ಳಿ ತಾಂಡಾದ ರವಿ ನಾಯ್ಕಗೆ (16) ಡಿಕ್ಕಿ ಹೊಡೆದಿದೆ. ರವಿ ಸ್ಥಳದಲ್ಲೇ ಮೃತಪಟ್ಟರೆ, ಕಾರಿನಲ್ಲಿದ್ದ ಸಚಿನ್ (27) ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದರು.</p>.<p>ಕಾರು ಚಾಲಕ ರಾಹುಲ್, ಕಾರಿನಲ್ಲಿದ್ದ ರಾಕೇಶ್, ಶಿವಕುಮಾರ ಹಾಗೂ ವರುಣ್ಗೆ ಗಾಯಗಳಾಗಿದ್ದವು. ರಾಹುಲ್ನನ್ನು ಇತ್ತೀಚೆಗೆ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರಾಜ್ಯದ ಪ್ರಭಾವಿ ಸಚಿವರ ಮಗನೇ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾಗಿದ್ದಾನೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>