<p><strong>ಬಳ್ಳಾರಿ</strong>: ‘ಗಣಿ ಬಾಧಿತ ಪ್ರದೇಶಗಳ ಸಮಗ್ರ ಪರಿಸರ ಯೋಜನೆ’ಯಡಿ (ಸಿಇಪಿಎಂಐಝಡ್) ಕೈಗೊಂಡ ಕಾರ್ಯಕ್ರಮಗಳನ್ನು ಪುನರ್ಪರಿಶೀಲಿಸುವಂತೆ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ‘ಸಮಾಜ ಪರಿವರ್ತನಾ ಸಮುದಾಯ’ವು ‘ಓವರ್ಸೈಟ್ ಅಥಾರಿಟಿ ಅಧ್ಯಕ್ಷರಿಗೆ ಪತ್ರ ಬರೆದಿದೆ. </p>.<p>ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಈ ಸಂಬಂಧ ಓವರ್ಸೈಟ್ ಅಥಾರಿಟಿ ಅಧ್ಯಕ್ಷ ನ್ಯಾ. ಬಿ. ಸುದರ್ಶನರೆಡ್ಡಿ ಅವರಿಗೆ ಎರಡು ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ.</p>.<p>‘ಸಿಇಪಿಎಂಐಝಡ್’ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳು ‘ನಿರ್ಮಾಣ– ಗುತ್ತಿಗೆದಾರ’ ಸ್ವರೂಪದ್ದಾಗಿದ್ದು, ಗಣಿಬಾಧಿತ ಪ್ರದೇಶಗಳ ಜನರ ಅದರಲ್ಲೂ ಮಹಿಳೆಯರು, ಮಕ್ಕಳ ಅಗತ್ಯಗಳನ್ನು ಪೂರೈಸುವುದಿಲ್ಲ ಎಂದಿದ್ದಾರೆ.</p>.<p>ಬುಧವಾರ ನಗರದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಎಸ್.ಆರ್. ಹಿರೇಮಠ ಈ ಪತ್ರಗಳನ್ನು ಬಿಡುಗಡೆ ಮಾಡಿದರು. ಗಣಿಬಾಧಿತ ಪ್ರದೇಶದ ವ್ಯಾಪ್ತಿಗೆ ಒಳಪಡದ ಸ್ಥಳಗಳಲ್ಲೂ ಸಿಇಪಿಎಂಐಝಡ್ ಅಡಿಯಲ್ಲಿ ಕೆಲ ಕಾರ್ಯಕ್ರಮಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಪತ್ರದಲ್ಲಿ ಆಕ್ಷೇಪಿಸಲಾಗಿದೆ.</p>.<p>ಸಿಇಪಿಎಂಐಝಡ್ ಅಡಿ ₹ 20,000 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಸದ್ಯ ಅನುಮತಿ ನೀಡಿರುವ 151 ಕಾರ್ಯಕ್ರಮಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಯೋಜನೆಗಳೂ ಇಲ್ಲ. ಗಣಿಬಾಧಿತವಾದ ಪ್ರದೇಶಗಳ ಮಕ್ಕಳು, ಹದಿಹರೆಯದ ಬಾಲಕಿಯರು ಹಾಗೂ ಗರ್ಭಿಣಿಯರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಕ್ರಮಗಳೂ ಇಲ್ಲ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಸರ್ಕಾರದ ಅನುದಾನದಡಿ (ಬಜೆಟ್) ಕೈಗೊಳ್ಳುವ ಸಾಮಾನ್ಯ ಕಾರ್ಯಕ್ರಮಗಳನ್ನು ಸಿಇಪಿಎಂಐಝಡ್ ಅನುದಾನದಡಿ ರೂಪಿಸಿದ ವಿಶೇಷ ಕಾರ್ಯಕ್ರಮಗಳ ಜತೆ ಬೆರೆಸಬಾರದು. ಎರಡೂ ಕಾರ್ಯಕ್ರಮಗಳೂ ಪ್ರತ್ಯೇಕವಾಗಿ ನಡೆಯಬೇಕು ಎಂದು ಹಿರೇಮಠ್ ಮತ್ತು ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ.</p>.<p>ಯಾವ ಪ್ರಮಾಣದಲ್ಲಿ ಪರಿಸರ ನಾಶವಾಗಿದೆ ಎಂದು ಅಧ್ಯಯನ ನಡೆಸಿ, ಪರಿಸರ ನಿರ್ವಹಣೆ ಯೋಜನೆ ರೂಪಿಸಿದ ಬಳಿಕವಷ್ಟೆ ಸಿಇಪಿಎಂಐಝಡ್ ಯೋಜನೆಯಲ್ಲಿನ ಕಾರ್ಯಕ್ರಮಗಳನ್ನು ಪರಿಗಣಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p>ಬಳ್ಳಾರಿಯ ವಕೀಲ ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಸಂಡೂರಿನ ಶ್ರೀಶೈಲ ಆಲದಹಳ್ಳಿ, ಶಿವಕುಮಾರ್ ಟಿ.ಎಂ, ತುಮಕೂರಿನ ಮಲ್ಲಿಕಾರ್ಜುನ ಭಟ್ಟರಹಳ್ಳಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ‘ಗಣಿ ಬಾಧಿತ ಪ್ರದೇಶಗಳ ಸಮಗ್ರ ಪರಿಸರ ಯೋಜನೆ’ಯಡಿ (ಸಿಇಪಿಎಂಐಝಡ್) ಕೈಗೊಂಡ ಕಾರ್ಯಕ್ರಮಗಳನ್ನು ಪುನರ್ಪರಿಶೀಲಿಸುವಂತೆ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ‘ಸಮಾಜ ಪರಿವರ್ತನಾ ಸಮುದಾಯ’ವು ‘ಓವರ್ಸೈಟ್ ಅಥಾರಿಟಿ ಅಧ್ಯಕ್ಷರಿಗೆ ಪತ್ರ ಬರೆದಿದೆ. </p>.<p>ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಈ ಸಂಬಂಧ ಓವರ್ಸೈಟ್ ಅಥಾರಿಟಿ ಅಧ್ಯಕ್ಷ ನ್ಯಾ. ಬಿ. ಸುದರ್ಶನರೆಡ್ಡಿ ಅವರಿಗೆ ಎರಡು ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ.</p>.<p>‘ಸಿಇಪಿಎಂಐಝಡ್’ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳು ‘ನಿರ್ಮಾಣ– ಗುತ್ತಿಗೆದಾರ’ ಸ್ವರೂಪದ್ದಾಗಿದ್ದು, ಗಣಿಬಾಧಿತ ಪ್ರದೇಶಗಳ ಜನರ ಅದರಲ್ಲೂ ಮಹಿಳೆಯರು, ಮಕ್ಕಳ ಅಗತ್ಯಗಳನ್ನು ಪೂರೈಸುವುದಿಲ್ಲ ಎಂದಿದ್ದಾರೆ.</p>.<p>ಬುಧವಾರ ನಗರದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಎಸ್.ಆರ್. ಹಿರೇಮಠ ಈ ಪತ್ರಗಳನ್ನು ಬಿಡುಗಡೆ ಮಾಡಿದರು. ಗಣಿಬಾಧಿತ ಪ್ರದೇಶದ ವ್ಯಾಪ್ತಿಗೆ ಒಳಪಡದ ಸ್ಥಳಗಳಲ್ಲೂ ಸಿಇಪಿಎಂಐಝಡ್ ಅಡಿಯಲ್ಲಿ ಕೆಲ ಕಾರ್ಯಕ್ರಮಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಪತ್ರದಲ್ಲಿ ಆಕ್ಷೇಪಿಸಲಾಗಿದೆ.</p>.<p>ಸಿಇಪಿಎಂಐಝಡ್ ಅಡಿ ₹ 20,000 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಸದ್ಯ ಅನುಮತಿ ನೀಡಿರುವ 151 ಕಾರ್ಯಕ್ರಮಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಯೋಜನೆಗಳೂ ಇಲ್ಲ. ಗಣಿಬಾಧಿತವಾದ ಪ್ರದೇಶಗಳ ಮಕ್ಕಳು, ಹದಿಹರೆಯದ ಬಾಲಕಿಯರು ಹಾಗೂ ಗರ್ಭಿಣಿಯರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಕ್ರಮಗಳೂ ಇಲ್ಲ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಸರ್ಕಾರದ ಅನುದಾನದಡಿ (ಬಜೆಟ್) ಕೈಗೊಳ್ಳುವ ಸಾಮಾನ್ಯ ಕಾರ್ಯಕ್ರಮಗಳನ್ನು ಸಿಇಪಿಎಂಐಝಡ್ ಅನುದಾನದಡಿ ರೂಪಿಸಿದ ವಿಶೇಷ ಕಾರ್ಯಕ್ರಮಗಳ ಜತೆ ಬೆರೆಸಬಾರದು. ಎರಡೂ ಕಾರ್ಯಕ್ರಮಗಳೂ ಪ್ರತ್ಯೇಕವಾಗಿ ನಡೆಯಬೇಕು ಎಂದು ಹಿರೇಮಠ್ ಮತ್ತು ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ.</p>.<p>ಯಾವ ಪ್ರಮಾಣದಲ್ಲಿ ಪರಿಸರ ನಾಶವಾಗಿದೆ ಎಂದು ಅಧ್ಯಯನ ನಡೆಸಿ, ಪರಿಸರ ನಿರ್ವಹಣೆ ಯೋಜನೆ ರೂಪಿಸಿದ ಬಳಿಕವಷ್ಟೆ ಸಿಇಪಿಎಂಐಝಡ್ ಯೋಜನೆಯಲ್ಲಿನ ಕಾರ್ಯಕ್ರಮಗಳನ್ನು ಪರಿಗಣಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p>ಬಳ್ಳಾರಿಯ ವಕೀಲ ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಸಂಡೂರಿನ ಶ್ರೀಶೈಲ ಆಲದಹಳ್ಳಿ, ಶಿವಕುಮಾರ್ ಟಿ.ಎಂ, ತುಮಕೂರಿನ ಮಲ್ಲಿಕಾರ್ಜುನ ಭಟ್ಟರಹಳ್ಳಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>