<p>ಕೂಡ್ಲಿಗಿ: ಪಟ್ಟಣದಲ್ಲಿ ಮಂಗಳವಾರ ಹೋಳಿಗೆಮ್ಮ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹೆಸರೇ ಹೇಳುವಂತೆ ಹೋಳಿಗೆ ನೈವೇದ್ಯ ಅರ್ಪಿಸುವುದೇ ಈ ಹಬ್ಬದ ವಿಶೇಷವಾಗಿದೆ.</p>.<p>ಮುಂದಿನ ದಿನಗಳಲ್ಲಿ ಉತ್ತಮ ಮಳೆ, ಬೆಳೆಯಾಗಲಿ, ಜನ, ಜಾನುವಾರುಗಳಿಗೆ ಯಾವುದೇ ರೋಗ ರುಜಿನಗಳು ಬರಬಾರದು ಎಂಬ ಉದ್ದೇಶದಿಂದ ಈ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. <br /> ಹೋಳಿಗೆಯೊಂದಿಗೆ ಇತರ ಭಕ್ಷ್ಯಗಳನ್ನು ಸಿದ್ಧಪಡಿಸುವ ಮಹಿಳೆಯರು, ಪುಟ್ಟ ಮಡಕೆ, ಅದರಲ್ಲಿ ಬೇವಿನ ಎಲೆಯನ್ನಿರಿಸಿಕೊಂಡು ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗದಲ್ಲಿರುವ ಊರಮ್ಮ ದೇವಿಯ ಆಲದ ಮರದ ಬಳಿ ಇಟ್ಟು ಹೋದರು. ಈ ರೀತಿ ಎಡೆಯನ್ನು ತೆಗೆದುಕೊಡು ಹೋಗುವಾಗ ಯಾರೊಂದಿಗೂ ಮಾತನಾಡಬಾರದು ಎಂಬ ನಿಯಮವೂ ಇರುವುದರಿಂದ ಜನರು ಮೌನವಾಗಿಯೇ ಮರದತ್ತ ಹೆಜ್ಜೆ ಹಾಕಿದರು.</p>.<p>ಅಲದ ಮರದ ಬುಡದಲ್ಲಿನ ದೇವಸ್ಥಾನದ ಮುಂಭಾಗದಲ್ಲಿ ಎಡೆಯನ್ನಿರಿಸಿದ ನಂತರ ದೇವತೆಗೆ ನಮಸ್ಕರಿಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಮನೆಗೆ ತೆರಳಿದ ಭಕ್ತರು ನಂತರ ಮನೆಯ ಸದಸ್ಯರೊಂದಿಗೆ ಮಾತ್ರ ಊಟ ಮಾಡಿದರು.</p>.<p>ಈ ಹಬ್ಬಕ್ಕೆ ಯಾರನ್ನೂ ಕರೆಯುವಂತಿಲ್ಲ. ಬೇರೆಯವರಿಗೆ ಊಟವನ್ನೂ ಕೊಡುವಂತಿಲ್ಲ. ಅದನ್ನು ತಾವೇ ಊಟ ಮಾಡಬೇಕು ಎಂಬ ನಿಯಮವೂ ಈ ಹಬ್ಬದ ಆಚರಣೆಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೂಡ್ಲಿಗಿ: ಪಟ್ಟಣದಲ್ಲಿ ಮಂಗಳವಾರ ಹೋಳಿಗೆಮ್ಮ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಹೆಸರೇ ಹೇಳುವಂತೆ ಹೋಳಿಗೆ ನೈವೇದ್ಯ ಅರ್ಪಿಸುವುದೇ ಈ ಹಬ್ಬದ ವಿಶೇಷವಾಗಿದೆ.</p>.<p>ಮುಂದಿನ ದಿನಗಳಲ್ಲಿ ಉತ್ತಮ ಮಳೆ, ಬೆಳೆಯಾಗಲಿ, ಜನ, ಜಾನುವಾರುಗಳಿಗೆ ಯಾವುದೇ ರೋಗ ರುಜಿನಗಳು ಬರಬಾರದು ಎಂಬ ಉದ್ದೇಶದಿಂದ ಈ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. <br /> ಹೋಳಿಗೆಯೊಂದಿಗೆ ಇತರ ಭಕ್ಷ್ಯಗಳನ್ನು ಸಿದ್ಧಪಡಿಸುವ ಮಹಿಳೆಯರು, ಪುಟ್ಟ ಮಡಕೆ, ಅದರಲ್ಲಿ ಬೇವಿನ ಎಲೆಯನ್ನಿರಿಸಿಕೊಂಡು ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗದಲ್ಲಿರುವ ಊರಮ್ಮ ದೇವಿಯ ಆಲದ ಮರದ ಬಳಿ ಇಟ್ಟು ಹೋದರು. ಈ ರೀತಿ ಎಡೆಯನ್ನು ತೆಗೆದುಕೊಡು ಹೋಗುವಾಗ ಯಾರೊಂದಿಗೂ ಮಾತನಾಡಬಾರದು ಎಂಬ ನಿಯಮವೂ ಇರುವುದರಿಂದ ಜನರು ಮೌನವಾಗಿಯೇ ಮರದತ್ತ ಹೆಜ್ಜೆ ಹಾಕಿದರು.</p>.<p>ಅಲದ ಮರದ ಬುಡದಲ್ಲಿನ ದೇವಸ್ಥಾನದ ಮುಂಭಾಗದಲ್ಲಿ ಎಡೆಯನ್ನಿರಿಸಿದ ನಂತರ ದೇವತೆಗೆ ನಮಸ್ಕರಿಸಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಮನೆಗೆ ತೆರಳಿದ ಭಕ್ತರು ನಂತರ ಮನೆಯ ಸದಸ್ಯರೊಂದಿಗೆ ಮಾತ್ರ ಊಟ ಮಾಡಿದರು.</p>.<p>ಈ ಹಬ್ಬಕ್ಕೆ ಯಾರನ್ನೂ ಕರೆಯುವಂತಿಲ್ಲ. ಬೇರೆಯವರಿಗೆ ಊಟವನ್ನೂ ಕೊಡುವಂತಿಲ್ಲ. ಅದನ್ನು ತಾವೇ ಊಟ ಮಾಡಬೇಕು ಎಂಬ ನಿಯಮವೂ ಈ ಹಬ್ಬದ ಆಚರಣೆಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>