<p><strong>ಹೊಸಪೇಟೆ: </strong>ಇಲ್ಲಿನ ತಾಲ್ಲೂಕು ಕಚೇರಿಯ ಜನಸ್ನೇಹಿ ಕಚೇರಿಯಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಪರಿಣಾಮ ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ.</p>.<p>ಸಿಬ್ಬಂದಿ ಈಗಷ್ಟೇ ಕಚೇರಿಗೆ ಬಂದಿದ್ದರು. ಬಾಗಿಲು ತೆಗೆದು ಒಳ ಹೋಗುವಷ್ಟರಲ್ಲಿ ಒಳಗಿನಿಂದ ದಟ್ಟ ಹೊಗೆ ಬರಲಾರಂಭಿಸಿತು. ನಂತರ ಬೆಂಕಿಯ ಕೆನ್ನಾಲಿಗೆ ಸಮೀಪದ ಎಲ್ಲ ಕೊಠಡಿಗಳಿಗೆ ಚಾಚಿಕೊಂಡಿದೆ.</p>.<p>ಹೆಚ್ಚಿನ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಹಿಂಬಾಗಿಲಿನ ಮೂಲಕ ಕೆಲ ಕಡತಗಳನ್ನು ಹೊರಸಾಗಿಸಿದರು. ಆದರೆ, ದಟ್ಟ ಹೊಗೆಯಿಂದ ಎಲ್ಲ ದಾಖಲೆಗಳು ಹೊರತರಲು ಆಗಲಿಲ್ಲ. ಹೀಗಾಗಿ ದಾಖಲೆಗಳು ಸುಟ್ಟು ಕರಕಲಾಗಿವೆ.</p>.<p>ಅಗ್ನಿಶಾಮಕ ಸಿಬ್ಬಂದಿಯೂ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ದಳ ವಾಹನಗಳು ಬಂದಿವೆ.</p>.<p>ತಹಶೀಲ್ದಾರ್ ಎಚ್. ವಿಶ್ವನಾಥ್, ಡಿವೈಎಸ್ಪಿ ವಿ. ರಘುಕುಮಾರ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ವಿಷಯ ಗೊತ್ತಾಗಿ ಜನ ತಾಲ್ಲೂಕು ಕಚೇರಿ ಎದುರು ಸೇರಿದ್ದರು. ಬಳಿಕ ಪೊಲೀಸರು ಅವರನ್ನು ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಇಲ್ಲಿನ ತಾಲ್ಲೂಕು ಕಚೇರಿಯ ಜನಸ್ನೇಹಿ ಕಚೇರಿಯಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಪರಿಣಾಮ ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ.</p>.<p>ಸಿಬ್ಬಂದಿ ಈಗಷ್ಟೇ ಕಚೇರಿಗೆ ಬಂದಿದ್ದರು. ಬಾಗಿಲು ತೆಗೆದು ಒಳ ಹೋಗುವಷ್ಟರಲ್ಲಿ ಒಳಗಿನಿಂದ ದಟ್ಟ ಹೊಗೆ ಬರಲಾರಂಭಿಸಿತು. ನಂತರ ಬೆಂಕಿಯ ಕೆನ್ನಾಲಿಗೆ ಸಮೀಪದ ಎಲ್ಲ ಕೊಠಡಿಗಳಿಗೆ ಚಾಚಿಕೊಂಡಿದೆ.</p>.<p>ಹೆಚ್ಚಿನ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಹಿಂಬಾಗಿಲಿನ ಮೂಲಕ ಕೆಲ ಕಡತಗಳನ್ನು ಹೊರಸಾಗಿಸಿದರು. ಆದರೆ, ದಟ್ಟ ಹೊಗೆಯಿಂದ ಎಲ್ಲ ದಾಖಲೆಗಳು ಹೊರತರಲು ಆಗಲಿಲ್ಲ. ಹೀಗಾಗಿ ದಾಖಲೆಗಳು ಸುಟ್ಟು ಕರಕಲಾಗಿವೆ.</p>.<p>ಅಗ್ನಿಶಾಮಕ ಸಿಬ್ಬಂದಿಯೂ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ದಳ ವಾಹನಗಳು ಬಂದಿವೆ.</p>.<p>ತಹಶೀಲ್ದಾರ್ ಎಚ್. ವಿಶ್ವನಾಥ್, ಡಿವೈಎಸ್ಪಿ ವಿ. ರಘುಕುಮಾರ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ವಿಷಯ ಗೊತ್ತಾಗಿ ಜನ ತಾಲ್ಲೂಕು ಕಚೇರಿ ಎದುರು ಸೇರಿದ್ದರು. ಬಳಿಕ ಪೊಲೀಸರು ಅವರನ್ನು ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>