<p><strong>ಹೊಸಪೇಟೆ(ವಿಜಯನಗರ):</strong> ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ನೇಮಕಾತಿ ಪ್ರಕ್ರಿಯೆಗೆ ಮುಂದಾಗಬೇಕೆಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಪೀರ್ಬಾಷಾ ಮಾತನಾಡಿ, ಪ್ರಧಾನ ಮಂತ್ರಿಗಳು ಸೇರಿದಂತೆ ರಾಜ್ಯ ಮುಖ್ಯಮಂತ್ರಿಗಳು ಕೂಡಲೇ ಯುವಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೂಡಲೇ ನೇಮಕಾತಿಗೆ ಮುಂದಾಗಬೇಕೆಂದು ಒತ್ತಾಯಿಸಿದರು.</p>.<p>ಸಮಿತಿಯ ಸದಸ್ಯ ಎರಿಸ್ವಾಮಿ ಮಾತನಾಡಿ, ‘ರಾಜ್ಯದ 43 ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇವೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಕೋವಿಡ್ ಕಾರಣ ಹೇಳಿ ಯಾವುದೇ ಒಂದು ಹುದ್ದೆ ತುಂಬಲಿಲ್ಲ. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಒಳಮೀಸಲಾತಿ ಹೆಸರಿನಲ್ಲಿ ಯಾವುದೇ ನೇಮಕಾತಿ ಮಾಡದಿರುವುದು ವಿಪರ್ಯಾಸ. ಕೂಡಲೇ ನೇಮಕಾತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸಮಿತಿಯ ಸದಸ್ಯರಾದ ಪ್ರಕಾಶ್ ಬಸವನದುರ್ಗಾ, ಪಾಲಾಕ್ಷ ಹಡಗಲಿ, ಮಂಜು ಬಾದಾಮಿ, ಶ್ರೀನಿವಾಸ, ಹರ್ಷಾ, ಅಭಿಲಾಶ್, ಸೈಯದ್ ಮೀರ್, ವಿನಯ್, ಪ್ರಕಾಶ್ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ನೇಮಕಾತಿ ಪ್ರಕ್ರಿಯೆಗೆ ಮುಂದಾಗಬೇಕೆಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಈ ಸಂದರ್ಭದಲ್ಲಿ ಪೀರ್ಬಾಷಾ ಮಾತನಾಡಿ, ಪ್ರಧಾನ ಮಂತ್ರಿಗಳು ಸೇರಿದಂತೆ ರಾಜ್ಯ ಮುಖ್ಯಮಂತ್ರಿಗಳು ಕೂಡಲೇ ಯುವಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೂಡಲೇ ನೇಮಕಾತಿಗೆ ಮುಂದಾಗಬೇಕೆಂದು ಒತ್ತಾಯಿಸಿದರು.</p>.<p>ಸಮಿತಿಯ ಸದಸ್ಯ ಎರಿಸ್ವಾಮಿ ಮಾತನಾಡಿ, ‘ರಾಜ್ಯದ 43 ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇವೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಕೋವಿಡ್ ಕಾರಣ ಹೇಳಿ ಯಾವುದೇ ಒಂದು ಹುದ್ದೆ ತುಂಬಲಿಲ್ಲ. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಒಳಮೀಸಲಾತಿ ಹೆಸರಿನಲ್ಲಿ ಯಾವುದೇ ನೇಮಕಾತಿ ಮಾಡದಿರುವುದು ವಿಪರ್ಯಾಸ. ಕೂಡಲೇ ನೇಮಕಾತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಸಮಿತಿಯ ಸದಸ್ಯರಾದ ಪ್ರಕಾಶ್ ಬಸವನದುರ್ಗಾ, ಪಾಲಾಕ್ಷ ಹಡಗಲಿ, ಮಂಜು ಬಾದಾಮಿ, ಶ್ರೀನಿವಾಸ, ಹರ್ಷಾ, ಅಭಿಲಾಶ್, ಸೈಯದ್ ಮೀರ್, ವಿನಯ್, ಪ್ರಕಾಶ್ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>