ಶನಿವಾರ ಸಂಜೆ ಏಳು ಗಂಟೆಗೆ ಬಾಗಿಲು ಮುಚ್ಚಿದ್ದ ಮಳಿಗೆಗಳು ಭಾನುವಾರ ಬೆಳಿಗ್ಗೆ ಬಾಗಿಲು ತೆರೆಯಲಿಲ್ಲ. ಸಾರಿಗೆ ಸಂಸ್ಥೆ ಬಸ್ಸುಗಳು, ಆಟೊ, ಮ್ಯಾಕ್ಸಿಕ್ಯಾಬ್ಗಳು ರಸ್ತೆಗೆ ಇಳಿಯಲಿಲ್ಲ. ಪ್ರಮುಖ ರಸ್ತೆಗಳೆಲ್ಲ ನಿರ್ಜನವಾಗಿದ್ದವು. ಆದರೆ, ಬೆಳಿಗ್ಗೆ ಎಂದಿನಂತೆ ದಿನಪತ್ರಿಕೆ, ಹಾಲು ಪೂರೈಕೆಯಾಯಿತು. ತುರ್ತು ಸೇವೆಗಳಾದ ಆಸ್ಪತ್ರೆ, ಕ್ಲಿನಿಕ್, ಔಷಧ ಮಳಿಗೆಗಳು, ಪೆಟ್ರೋಲ್ ಬಂಕ್ ಎಂದಿನಂತೆ ತೆರೆದಿದ್ದವು.
ಮಾಂಸ, ಮದ್ಯದಂಗಡಿಗಳು ಮುಚ್ಚಿದ್ದವು. ರಾಮ ಟಾಕೀಸ್ ಬಳಿ ಕೆಲವರು ಹಿಂಬಾಗಿಲು ತೆರೆದು ಮಾಂಸ ಮಾರಾಟ ಮಾಡುತ್ತಿದ್ದರು. ವಿಷಯ ಗೊತ್ತಾಗಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಎಚ್ಚರಿಕೆ ಕೊಟ್ಟು ಮುಚ್ಚಿಸಿದರು.