ಹೊಸಪೇಟೆ: ವನ್ಯಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಮೋಟಾರ್ ಬೈಕ್ ರ್ಯಾಲಿಗೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಶುಕ್ರವಾರ ತಾಲ್ಲೂಕಿನ ಕಮಲಾಪುರ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದ ಬಳಿ ಚಾಲನೆ ನೀಡಿದರು.
ಹದಿನೈದು ಬೈಕ್ ಸವಾರರು ಪಾಲ್ಗೊಂಡಿದ್ದರು. ಡಿಸಿಎಫ್ ಲಿಂಗರಾಜ, ವಲಯ ಅರಣ್ಯ ಅಧಿಕಾರಿಗಳಾದ ವಿನಯ್, ರಮೇಶಕುಮಾರ ಇದ್ದರು.