<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಉತ್ತಂಗಿ ಗ್ರಾಮದಲ್ಲಿ ಹೊಸಪೇಟೆ-ಬೆಳಗಾವಿ ನೂತನ ಬಸ್ ಮಾರ್ಗಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಗ್ರಾಮಸ್ಥರು ಬಸ್ಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ‘ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಇಟ್ಟಿಗಿ, ಉತ್ತಂಗಿ ಹೂವಿನಹಡಗಲಿ, ಮುಂಡರಗಿ, ಗದಗ ಮೂಲಕ ಬೆಳಗಾವಿಗೆ ಬಸ್ ಮಾರ್ಗ ಆರಂಭಿಸಲಾಗಿದೆ’ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದರು.</p>.<p>‘ಹೊಸಪೇಟೆ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಉತ್ತಂಗಿ ಸುತ್ತಮುತ್ತ ಗ್ರಾಮಗಳ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ ಬೆಳಗಾವಿ ಬಸ್ ಮಾರ್ಗ ಆರಂಭಿಸಿದ್ದಾರೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿಗೆ ತೆರಳುವ ವಿದ್ಯಾರ್ಥಿಗಳು, ವರ್ತಕರು, ರೋಗಿಗಳಿಗೆ ಅನುಕೂಲವಾಗಿದೆ. ಈ ಭಾಗದ ಜನರ ಬೇಡಿಕೆ ಈಡೇರಿಸಿದ ಅಧಿಕಾರಿಗಳನ್ನು ಅಭಿನಂದಿಸುತ್ತೇವೆ’ ಎಂದು ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ. ಸಿದ್ದೇಶ ಹೇಳಿದರು.</p>.<p>ಗ್ರಾಮದ ಮುಖಂಡರಾದ ಕರಿಗಾರ ಕೊಟ್ರಪ್ಪ, ಪಿ.ಪಂಪಣ್ಣ, ಮೂಲಿಮನಿ ಶರಣಪ್ಪ, ಪ್ರಭು ಕಬ್ಬಜ್ಜಿ, ಕೆ.ವೀರಣ್ಣ, ದಾನನಗೌಡ, ಎಸ್.ಎಂ.ವೀರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಉತ್ತಂಗಿ ಗ್ರಾಮದಲ್ಲಿ ಹೊಸಪೇಟೆ-ಬೆಳಗಾವಿ ನೂತನ ಬಸ್ ಮಾರ್ಗಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಗ್ರಾಮಸ್ಥರು ಬಸ್ಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ‘ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಇಟ್ಟಿಗಿ, ಉತ್ತಂಗಿ ಹೂವಿನಹಡಗಲಿ, ಮುಂಡರಗಿ, ಗದಗ ಮೂಲಕ ಬೆಳಗಾವಿಗೆ ಬಸ್ ಮಾರ್ಗ ಆರಂಭಿಸಲಾಗಿದೆ’ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದರು.</p>.<p>‘ಹೊಸಪೇಟೆ ಸಾರಿಗೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಉತ್ತಂಗಿ ಸುತ್ತಮುತ್ತ ಗ್ರಾಮಗಳ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ ಬೆಳಗಾವಿ ಬಸ್ ಮಾರ್ಗ ಆರಂಭಿಸಿದ್ದಾರೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿಗೆ ತೆರಳುವ ವಿದ್ಯಾರ್ಥಿಗಳು, ವರ್ತಕರು, ರೋಗಿಗಳಿಗೆ ಅನುಕೂಲವಾಗಿದೆ. ಈ ಭಾಗದ ಜನರ ಬೇಡಿಕೆ ಈಡೇರಿಸಿದ ಅಧಿಕಾರಿಗಳನ್ನು ಅಭಿನಂದಿಸುತ್ತೇವೆ’ ಎಂದು ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ. ಸಿದ್ದೇಶ ಹೇಳಿದರು.</p>.<p>ಗ್ರಾಮದ ಮುಖಂಡರಾದ ಕರಿಗಾರ ಕೊಟ್ರಪ್ಪ, ಪಿ.ಪಂಪಣ್ಣ, ಮೂಲಿಮನಿ ಶರಣಪ್ಪ, ಪ್ರಭು ಕಬ್ಬಜ್ಜಿ, ಕೆ.ವೀರಣ್ಣ, ದಾನನಗೌಡ, ಎಸ್.ಎಂ.ವೀರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>