ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆದಾರ ಪಿಚ್ಚೇಶ್ವರರಾವ್ ಮನೆ–ಕಚೇರಿ ಮೇಲೆ ಐಟಿ ದಾಳಿ

Published 7 ಫೆಬ್ರುವರಿ 2024, 19:01 IST
Last Updated 7 ಫೆಬ್ರುವರಿ 2024, 19:01 IST
ಅಕ್ಷರ ಗಾತ್ರ

ಬಳ್ಳಾರಿ: ಶ್ರೀನಿವಾಸ್ ಕನ್‌ಸ್ಟ್ರಕ್ಷನ್ಸ್ ಮಾಲೀಕ, ಜಿಲ್ಲೆಯ ಪ್ರಮುಖ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದರು.

ತಾಳೂರು ರಸ್ತೆಯಲ್ಲಿರುವ ಅವರ ಮನೆ ಹಾಗೂ ಕಚೇರಿಯ ಮೇಲೆ ಬೆಳಿಗ್ಗೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಐದಾರು ಗಂಟೆ ಪರಿಶೀಲಿಸಿದರು.

ಪಿಚ್ಚೇಶ್ವರ ರಾವ್ ಅವರು ರಸ್ತೆ, ಕಾಲುವೆಗಳು ಸೇರಿ ಬೃಹತ್‌ ಕಾಮಗಾರಿಗಳ ಗುತ್ತಿಗೆದಾರರು. ಶ್ರೀನಿವಾಸ ಕನ್‌ಸ್ಟ್ರಕ್ಷನ್ಸ್ ಮತ್ತು ಶ್ರೀನಿವಾಸ ಮಿನರೆಲ್ಸ್‌ ಹೆಸರಿನಲ್ಲಿ ಅವರು ಗುತ್ತಿಗೆ ಕಾಮಗಾರಿಗಳನ್ನು ನಡೆಸುತ್ತಾರೆ.

ಆದಾಯ ತೆರಿಗೆ ವಂಚನೆ ಮತ್ತು ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆಯ ಆರೋಪದ ಮೇಲೆ ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯ ನಾಲ್ವರು ಅಧಿಕಾರಿಗಳು ದಾಳಿ ನಡೆಸಿದ್ದಾರೆ.

‘ಕಾರ್ಯಾಚರಣೆ ವೇಳೆ ಪಿಚ್ಚೇಶ್ವರ ರಾವ್ ಮನೆಯಲ್ಲಿದ್ದರು. ಅವರಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT