<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಹರವಿ, ಲಿಂಗನಾಯಕನಹಳ್ಳಿ, ಕುರುವತ್ತಿ ಬಳಿಯ ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಶನಿವಾರ ದಾಳಿ ನಡೆಸಿದ ಅಧಿಕಾರಿಗಳು, 116 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಜನರ ವಿರುದ್ಧ ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನದಿಯಲ್ಲಿನ ಮರಳನ್ನು ಕಬ್ಬಿಣದ ತೆಪ್ಪಗಳಲ್ಲಿ ತುಂಬಿ ದಡಕ್ಕೆ ಸಾಗಿಸಿ, ಅಲ್ಲಿಂದ ಲಾರಿ, ಟ್ರ್ಯಾಕ್ಟರ್ ಗಳ ಮೂಲಕ ಬೇರೆಡೆಗೆ ಕಳುಹಿಸಲಾಗುತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಹಿರೇಹಡಗಲಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದರು. ವಶಪಡಿಸಿಕೊಂಡ ಮರಳನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದರು.</p>.<p>ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೀರ್ತಿ ಕುಮಾರ್, ಕಿರಣ್, ಪಿ. ಮಲ್ಲಯ್ಯ, ಪಿಎಸ್ಐ ಭರತರೆಡ್ಡಿ, ಪೊಲೀಸ್ ಸಿಬ್ಬಂದಿ ಶ್ರೀಶೈಲ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.</p>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಹರವಿ, ಲಿಂಗನಾಯಕನಹಳ್ಳಿ, ಕುರುವತ್ತಿ ಬಳಿಯ ತುಂಗಭದ್ರಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಶನಿವಾರ ದಾಳಿ ನಡೆಸಿದ ಅಧಿಕಾರಿಗಳು, 116 ಮೆಟ್ರಿಕ್ ಟನ್ ಮರಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಆರು ಜನರ ವಿರುದ್ಧ ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನದಿಯಲ್ಲಿನ ಮರಳನ್ನು ಕಬ್ಬಿಣದ ತೆಪ್ಪಗಳಲ್ಲಿ ತುಂಬಿ ದಡಕ್ಕೆ ಸಾಗಿಸಿ, ಅಲ್ಲಿಂದ ಲಾರಿ, ಟ್ರ್ಯಾಕ್ಟರ್ ಗಳ ಮೂಲಕ ಬೇರೆಡೆಗೆ ಕಳುಹಿಸಲಾಗುತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಹಿರೇಹಡಗಲಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದರು. ವಶಪಡಿಸಿಕೊಂಡ ಮರಳನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದರು.</p>.<p>ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೀರ್ತಿ ಕುಮಾರ್, ಕಿರಣ್, ಪಿ. ಮಲ್ಲಯ್ಯ, ಪಿಎಸ್ಐ ಭರತರೆಡ್ಡಿ, ಪೊಲೀಸ್ ಸಿಬ್ಬಂದಿ ಶ್ರೀಶೈಲ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.</p>