<p><strong>ಹೂವಿನಹಡಗಲಿ</strong>: ತುಂಗಭದ್ರಾ ನದಿ ನೀರಿನ ಮಟ್ಟ ಇಳಿಮುಖವಾಗುತ್ತಿದ್ದಂತೆ ಮರಳು ಅಕ್ರಮ ದಂಧೆ ಶುರುವಾಗಿದೆ. ಹಾವೇರಿ ಭಾಗದ ಮರಳು ದಂಧೆಕೋರರು ಬಲದಂಡೆ ಹೂವಿನಹಡಗಲಿ ತಾಲ್ಲೂಕಿನ ನದಿ ತೀರದ ಮರಳನ್ನು ತೆಪ್ಪಗಳ ಮೂಲಕ ದೋಚುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ತಾಲ್ಲೂಕಿನ ಹಿರೇಬನ್ನಿಮಟ್ಟಿ, ನಂದಿಗಾವಿ, ಬ್ಯಾಲಹುಣ್ಸಿ ಗ್ರಾಮಗಳ ಬಳಿಯ ನದಿ ತೀರದಲ್ಲಿ ಮರಳು ತೆಪ್ಪಗಳ ಭರಾಟೆ ಜೋರಾಗಿದೆ. ಈ ಕಡೆ ದಂಡೆಯಲ್ಲಿ ಲಭ್ಯವಿರುವ ಗುಣಮಟ್ಟದ ಮರಳನ್ನು ತೆಪ್ಪಗಳಲ್ಲಿ ತುಂಬಿ ಆ ಕಡೆಯ ಗಳಗನಾಥ, ಮೇವುಂಡಿ, ತೇರದಹಳ್ಳಿಯ ದಡಕ್ಕೆ ಸಾಗಿಸಲಾಗುತ್ತಿದೆ.</p>.<p>ಎಡ ದಂಡೆಯಲ್ಲಿ ಆಳವಾದ ಗುಂಡಿಗಳಿರುವುದರಿಂದ ಸುಲಭವಾಗಿ ಮರಳು ತೆಗೆಯಲು ಸಾಧ್ಯವಿಲ್ಲ. ಹಾಗಾಗಿ ಆ ಭಾಗದ ದಂಧೆಕೋರರು ಹೂವಿನಹಡಗಲಿ ತಾಲ್ಲೂಕು ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎದು ದೂರಿದ್ದಾರೆ.</p>.<p>‘ಈ ಭಾಗದ ಮರಳನ್ನು ಪ್ರತಿದಿನ 50-60 ತೆಪ್ಪಗಳಲ್ಲಿ ತುಂಬಿಸಿ ಆ ಭಾಗಕ್ಕೆ ನಿರಂತರ ಸಾಗಣೆ ಮಾಡಲಾಗುತ್ತಿದೆ. ಬೆಳಗಿನ ಜಾವದಿಂದ ಶುರುವಾಗುವ ಈ ದಂಧೆ ಸಂಜೆಯವರೆಗೂ ನಡೆಯುತ್ತದೆ. ಬೆಳದಿಂಗಳು ಇದ್ದಲ್ಲಿ ರಾತ್ರಿಯೂ ತೆಪ್ಪಗಳು ಓಡಾಡುತ್ತವೆ’ ಎಂದು ಹಿರೇಬನ್ನಿಮಟ್ಟಿ ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ಹಿರೇಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹರವಿ, ಲಿಂಗನಾಯಕನಹಳ್ಳಿ, ಕುರುವತ್ತಿ ಗ್ರಾಮದ ನದಿ ತೀರದಲ್ಲಿ ಮರಳು ದಂಧೆ ನಿರಾತಂಕವಾಗಿ ನಡೆಯುತ್ತಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ನಿರಂತರ ದಾಳಿ ನಡುವೆಯೂ ದಂಧೆ ನಿಯಂತ್ರಣಕ್ಕೆ ಬರುತ್ತಿಲ್ಲ.</p>.<p>ತಾಲ್ಲೂಕಿನ ಮರಳು ಬ್ಲಾಕ್ ಗಳಿಗೆ ಕಳೆದ ಮೂರು ವರ್ಷಗಳಿಂದ ಟೆಂಡರ್ ಆಗದೇ ಇರುವುದರಿಂದ ಕಟ್ಟಡ, ನಿರ್ಮಾಣ ಕೆಲಸಗಳಿಗೆ ಮರಳು ಅಭಾವ ಉಂಟಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ದಂಧೆಕೋರರು ಅಕ್ರಮ ಮಾರ್ಗ ಮೂಲಕ ಮರಳು ದೋಚಿ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. </p>.<p>ಹಾವೇರಿ-ಹೂವಿನಹಡಗಲಿ ಭಾಗಗಳಿಂದ ಏಕಕಾಲಕ್ಕೆ ಜಂಟಿ ದಾಳಿ ನಡೆಸಿ ತೆಪ್ಪಗಳ ಸಾಗಾಟಕ್ಕೆ ಕಡಿವಾಣ ಹಾಕಬೇಕು. ಮರಳು ಬ್ಲಾಕ್ ಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಸರ್ಕಾರಿ ದರದಲ್ಲಿ ಮರಳು ಪೂರೈಕೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><blockquote>ಹೂವಿನಹಡಗಲಿ ಭಾಗದಲ್ಲಿ ಅಕ್ರಮಕ್ಕೆ ಬ್ರೇಕ್ ಹಾಕಿದ್ದೇವೆ. ತೆಪ್ಪಗಳ ಸಾಗಣೆ ತಡೆಯಲು ಎಡ-ಬಲ ದಂಡೆಗಳಲ್ಲಿ ಜಂಟಿ ಕಾರ್ಯಾಚರಣೆಗೆ ಯೋಜಿಸಿದ್ದೇವೆ</blockquote><span class="attribution">ಕೀರ್ತಿಕುಮಾರ್, ಜಿಲ್ಲಾ ಜಾಗೃತ ದಳ ಅಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತುಂಗಭದ್ರಾ ನದಿ ನೀರಿನ ಮಟ್ಟ ಇಳಿಮುಖವಾಗುತ್ತಿದ್ದಂತೆ ಮರಳು ಅಕ್ರಮ ದಂಧೆ ಶುರುವಾಗಿದೆ. ಹಾವೇರಿ ಭಾಗದ ಮರಳು ದಂಧೆಕೋರರು ಬಲದಂಡೆ ಹೂವಿನಹಡಗಲಿ ತಾಲ್ಲೂಕಿನ ನದಿ ತೀರದ ಮರಳನ್ನು ತೆಪ್ಪಗಳ ಮೂಲಕ ದೋಚುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ತಾಲ್ಲೂಕಿನ ಹಿರೇಬನ್ನಿಮಟ್ಟಿ, ನಂದಿಗಾವಿ, ಬ್ಯಾಲಹುಣ್ಸಿ ಗ್ರಾಮಗಳ ಬಳಿಯ ನದಿ ತೀರದಲ್ಲಿ ಮರಳು ತೆಪ್ಪಗಳ ಭರಾಟೆ ಜೋರಾಗಿದೆ. ಈ ಕಡೆ ದಂಡೆಯಲ್ಲಿ ಲಭ್ಯವಿರುವ ಗುಣಮಟ್ಟದ ಮರಳನ್ನು ತೆಪ್ಪಗಳಲ್ಲಿ ತುಂಬಿ ಆ ಕಡೆಯ ಗಳಗನಾಥ, ಮೇವುಂಡಿ, ತೇರದಹಳ್ಳಿಯ ದಡಕ್ಕೆ ಸಾಗಿಸಲಾಗುತ್ತಿದೆ.</p>.<p>ಎಡ ದಂಡೆಯಲ್ಲಿ ಆಳವಾದ ಗುಂಡಿಗಳಿರುವುದರಿಂದ ಸುಲಭವಾಗಿ ಮರಳು ತೆಗೆಯಲು ಸಾಧ್ಯವಿಲ್ಲ. ಹಾಗಾಗಿ ಆ ಭಾಗದ ದಂಧೆಕೋರರು ಹೂವಿನಹಡಗಲಿ ತಾಲ್ಲೂಕು ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎದು ದೂರಿದ್ದಾರೆ.</p>.<p>‘ಈ ಭಾಗದ ಮರಳನ್ನು ಪ್ರತಿದಿನ 50-60 ತೆಪ್ಪಗಳಲ್ಲಿ ತುಂಬಿಸಿ ಆ ಭಾಗಕ್ಕೆ ನಿರಂತರ ಸಾಗಣೆ ಮಾಡಲಾಗುತ್ತಿದೆ. ಬೆಳಗಿನ ಜಾವದಿಂದ ಶುರುವಾಗುವ ಈ ದಂಧೆ ಸಂಜೆಯವರೆಗೂ ನಡೆಯುತ್ತದೆ. ಬೆಳದಿಂಗಳು ಇದ್ದಲ್ಲಿ ರಾತ್ರಿಯೂ ತೆಪ್ಪಗಳು ಓಡಾಡುತ್ತವೆ’ ಎಂದು ಹಿರೇಬನ್ನಿಮಟ್ಟಿ ಗ್ರಾಮಸ್ಥರು ತಿಳಿಸಿದ್ದಾರೆ.</p>.<p>ಹಿರೇಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹರವಿ, ಲಿಂಗನಾಯಕನಹಳ್ಳಿ, ಕುರುವತ್ತಿ ಗ್ರಾಮದ ನದಿ ತೀರದಲ್ಲಿ ಮರಳು ದಂಧೆ ನಿರಾತಂಕವಾಗಿ ನಡೆಯುತ್ತಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ನಿರಂತರ ದಾಳಿ ನಡುವೆಯೂ ದಂಧೆ ನಿಯಂತ್ರಣಕ್ಕೆ ಬರುತ್ತಿಲ್ಲ.</p>.<p>ತಾಲ್ಲೂಕಿನ ಮರಳು ಬ್ಲಾಕ್ ಗಳಿಗೆ ಕಳೆದ ಮೂರು ವರ್ಷಗಳಿಂದ ಟೆಂಡರ್ ಆಗದೇ ಇರುವುದರಿಂದ ಕಟ್ಟಡ, ನಿರ್ಮಾಣ ಕೆಲಸಗಳಿಗೆ ಮರಳು ಅಭಾವ ಉಂಟಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ದಂಧೆಕೋರರು ಅಕ್ರಮ ಮಾರ್ಗ ಮೂಲಕ ಮರಳು ದೋಚಿ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. </p>.<p>ಹಾವೇರಿ-ಹೂವಿನಹಡಗಲಿ ಭಾಗಗಳಿಂದ ಏಕಕಾಲಕ್ಕೆ ಜಂಟಿ ದಾಳಿ ನಡೆಸಿ ತೆಪ್ಪಗಳ ಸಾಗಾಟಕ್ಕೆ ಕಡಿವಾಣ ಹಾಕಬೇಕು. ಮರಳು ಬ್ಲಾಕ್ ಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಸರ್ಕಾರಿ ದರದಲ್ಲಿ ಮರಳು ಪೂರೈಕೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><blockquote>ಹೂವಿನಹಡಗಲಿ ಭಾಗದಲ್ಲಿ ಅಕ್ರಮಕ್ಕೆ ಬ್ರೇಕ್ ಹಾಕಿದ್ದೇವೆ. ತೆಪ್ಪಗಳ ಸಾಗಣೆ ತಡೆಯಲು ಎಡ-ಬಲ ದಂಡೆಗಳಲ್ಲಿ ಜಂಟಿ ಕಾರ್ಯಾಚರಣೆಗೆ ಯೋಜಿಸಿದ್ದೇವೆ</blockquote><span class="attribution">ಕೀರ್ತಿಕುಮಾರ್, ಜಿಲ್ಲಾ ಜಾಗೃತ ದಳ ಅಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>