<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಹರವಿ, ಕುರುವತ್ತಿ ಬಳಿ ತುಂಗಭದ್ರಾ ನದಿ ಪಾತ್ರದಲ್ಲಿನ ಮರಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಮೂರು ಲಾರಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.</p>.<p>ನದಿಯಲ್ಲಿನ ಮರಳನ್ನು ತೆಪ್ಪಗಳ ಮೂಲಕ ದಡಕ್ಕೆ ಸಾಗಿಸಿ, ಅಲ್ಲಿಂದ ಲಾರಿಗಳಿಗೆ ತುಂಬಿಸಿ ನಗರ ಪ್ರದೇಶಗಳಿಗೆ ಕಳಿಸುವ ದಂಧೆ ಕೆಲ ದಿನಗಳಿಂದ ನಡೆಯುತಿತ್ತು. ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.<p>ಹೊಳಲು ಸಮೀಪದ ಡೊಂಬರಹಳ್ಳಿ, ಬೂದನೂರು ಬಳಿ ಮರಳಿನ ಎರಡು ಟಿಪ್ಪರ್ ವಶಕ್ಕೆ ಪಡೆದು ಹಿರೇಹಡಗಲಿ ಠಾಣೆಗೆ ಒಪ್ಪಿಸಿದ್ದಾರೆ. ಕುರುವತ್ತಿಯಿಂದ ಹರಪನಹಳ್ಳಿ ಕಡೆಗೆ ಹೊರಟಿದ್ದ ಸ್ವರಾಜ್ ಮಜ್ಡಾ ಲಾರಿಯನ್ನು ವಶಕ್ಕೆ ಪಡೆದು, ಹರಪನಹಳ್ಳಿ ಠಾಣೆಗೆ ಒಪ್ಪಿಸಿದ್ದಾರೆ.</p>.<p>ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾದ ಪಿ.ಮಲ್ಲಯ್ಯ, ಜಿ.ಮಂಜುನಾಥ, ಡಿ.ಆರ್.ಕಿರಣ ದಾಳಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಹರವಿ, ಕುರುವತ್ತಿ ಬಳಿ ತುಂಗಭದ್ರಾ ನದಿ ಪಾತ್ರದಲ್ಲಿನ ಮರಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಮೂರು ಲಾರಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.</p>.<p>ನದಿಯಲ್ಲಿನ ಮರಳನ್ನು ತೆಪ್ಪಗಳ ಮೂಲಕ ದಡಕ್ಕೆ ಸಾಗಿಸಿ, ಅಲ್ಲಿಂದ ಲಾರಿಗಳಿಗೆ ತುಂಬಿಸಿ ನಗರ ಪ್ರದೇಶಗಳಿಗೆ ಕಳಿಸುವ ದಂಧೆ ಕೆಲ ದಿನಗಳಿಂದ ನಡೆಯುತಿತ್ತು. ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.<p>ಹೊಳಲು ಸಮೀಪದ ಡೊಂಬರಹಳ್ಳಿ, ಬೂದನೂರು ಬಳಿ ಮರಳಿನ ಎರಡು ಟಿಪ್ಪರ್ ವಶಕ್ಕೆ ಪಡೆದು ಹಿರೇಹಡಗಲಿ ಠಾಣೆಗೆ ಒಪ್ಪಿಸಿದ್ದಾರೆ. ಕುರುವತ್ತಿಯಿಂದ ಹರಪನಹಳ್ಳಿ ಕಡೆಗೆ ಹೊರಟಿದ್ದ ಸ್ವರಾಜ್ ಮಜ್ಡಾ ಲಾರಿಯನ್ನು ವಶಕ್ಕೆ ಪಡೆದು, ಹರಪನಹಳ್ಳಿ ಠಾಣೆಗೆ ಒಪ್ಪಿಸಿದ್ದಾರೆ.</p>.<p>ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾದ ಪಿ.ಮಲ್ಲಯ್ಯ, ಜಿ.ಮಂಜುನಾಥ, ಡಿ.ಆರ್.ಕಿರಣ ದಾಳಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>