<p><strong>ಬಳ್ಳಾರಿ:</strong> ಚುನಾವಣಾ ಮಾದರಿ ನೀತಿ ಸಂಹಿತೆ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮಿಶ್ರಾ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. </p>.<p>ಚುನಾವಣೆ ಹಿನ್ನೆಲೆಯಲ್ಲಿ ಅವರು ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು. </p>.<p>ಸ್ಥಳೀಯ ರಾಜಕೀಯ ನಾಯಕರೊಂದಿಗೆ ಸಭೆ ನಡೆಸಬೇಕು. ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗಬಾರದು ಎಂದು ಸೂಚನೆ ನೀಡಿದರು. </p>.<p>ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು ಬಳಸಬೇಕು. ಚೆಕ್ ಪೋಸ್ಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಚಾಲ್ತಿಯಲ್ಲಿವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಕಂಟ್ರೋಲ್ ರೂಂಗಳ ಕಡೆಗೂ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಕಾರ್ಯಪ್ರವೃತ್ತರಾಗಿ: ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಎಲ್ಲಾ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಬಿಎಲ್ಒಗಳಿಗೆ ಸೂಚಿಸಿದರು.</p>.<p>ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಶನಿವಾರ ಸಂಜೆ ಸಭೆ ನಡೆಸಿದರು. ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಕಟ್ಟುನಿಟ್ಟಿನ ಪಾಲನೆಯಾಗಬೇಕು ಎಂದರು. ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಚುನಾವಣಾ ಮಾದರಿ ನೀತಿ ಸಂಹಿತೆ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮಿಶ್ರಾ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. </p>.<p>ಚುನಾವಣೆ ಹಿನ್ನೆಲೆಯಲ್ಲಿ ಅವರು ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು. </p>.<p>ಸ್ಥಳೀಯ ರಾಜಕೀಯ ನಾಯಕರೊಂದಿಗೆ ಸಭೆ ನಡೆಸಬೇಕು. ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗಬಾರದು ಎಂದು ಸೂಚನೆ ನೀಡಿದರು. </p>.<p>ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿರುವ ವಾಹನಗಳನ್ನು ಬಳಸಬೇಕು. ಚೆಕ್ ಪೋಸ್ಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಚಾಲ್ತಿಯಲ್ಲಿವೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. ಕಂಟ್ರೋಲ್ ರೂಂಗಳ ಕಡೆಗೂ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಕಾರ್ಯಪ್ರವೃತ್ತರಾಗಿ: ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಎಲ್ಲಾ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಬಿಎಲ್ಒಗಳಿಗೆ ಸೂಚಿಸಿದರು.</p>.<p>ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಶನಿವಾರ ಸಂಜೆ ಸಭೆ ನಡೆಸಿದರು. ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಕಟ್ಟುನಿಟ್ಟಿನ ಪಾಲನೆಯಾಗಬೇಕು ಎಂದರು. ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>