<p><strong>ಬಳ್ಳಾರಿ</strong>: ಬಳ್ಳಾರಿ ಜಿಲ್ಲೆಯ ಕಾರ್ಖಾನೆ ಹಾಗೂ ಕೈಗಾರಿಕೋದ್ಯಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತಂತೆ ಚರ್ಚಿಸಲು ಸಚಿವರು, ಶಾಸಕರು, ಕೈಗಾರಿಕೋದ್ಯಮಿಗಳ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 30ರಂದು ಕರೆದಿದ್ದಾರೆ. </p>.<p>ಈ ಸಭೆಗೆ ಮುಖ್ಯವಾಗಿ ಆರ್ಸೆಲರ್ ಮಿತ್ತಲ್, ಉತ್ತಮ ಗಾಲ್ವಾ ಮತ್ತು ವಿಜಯನಗರ ಸ್ಟೀಲ್ ಲಿಮಿಟೆಡ್ನ ಮುಖ್ಯಸ್ಥರನ್ನು ಆಹ್ವಾನಿಸಿರುವುದು ಕುತೂಹಲ ಕೆರಳಿಸಿದೆ.</p>.<p>ಈ ಮೂರು ಸಂಸ್ಥೆಗಳು ಕೈಗಾರಿಕೆ ಆರಂಭಿಸುವುದಾಗಿ ಕುಡುತಿನಿಯಲ್ಲಿ ಭಾರಿ ಪ್ರಮಾಣದ ಭೂಮಿ ಖರೀದಿಸಿವೆ. ಈ ಕಂಪನಿಗಳಿಗೆ ಭೂಮಿ ನೀಡಿರುವ ರೈತರು ತಮಗೆ ಹೆಚ್ಚಿನ ಪರಿಹಾರ ಸಿಗಬೇಕು ಎಂದು ಸಾವಿರ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಪನಿಗಳು ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂಬ ಒತ್ತಾಯವೂ ಇದೆ. ಈ ಮಧ್ಯೆ ಮುಖ್ಯಮಂತ್ರಿ ಸಭೆ ಆಯೋಜಿಸಿದ್ದಾರೆ. </p>.<p>ಮುಖ್ಯಮಂತ್ರಿ ಸೂಚನೆಯಂತೆ ಅವರ ವಿಶೇಷ ಕರ್ತವ್ಯಾಧಿಕಾರಿಯು ಬುಧವಾರ ಸೂಚನಾ ಪತ್ರ ಹೊರಡಿಸಿದ್ದು, ಅಗತ್ಯ ಮಾಹಿತಿಯೊಂದಿಗೆ ಬರುವಂತೆ ಪತ್ರದಲ್ಲಿ ತಿಳಿಸಲಾಗಿದೆ. </p>.<p>ಸಭೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ವಸತಿ, ವಕ್ಸ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಭೆಯ ಕುರಿತು ತಿಳಿಸುವಂತೆ ಅವರ ಆಪ್ತ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ. </p>.<p>ಜತೆಗೆ, ಸಂಸದ ಇ. ತುಕಾರಾಮ್, ಶಾಸಕ ಬಿ. ನಾಗೇಂದ್ರ, ಜೆ.ಎನ್. ಗಣೇಶ್, ಅನ್ನಪೂರ್ಣ, ಆರ್ಥಿಕ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕೆಐಎಡಿಬಿ ಸಿಇಒ, ಬಳ್ಳಾರಿ ಜಿಲ್ಲಾಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬಳ್ಳಾರಿ ಜಿಲ್ಲೆಯ ಕಾರ್ಖಾನೆ ಹಾಗೂ ಕೈಗಾರಿಕೋದ್ಯಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತಂತೆ ಚರ್ಚಿಸಲು ಸಚಿವರು, ಶಾಸಕರು, ಕೈಗಾರಿಕೋದ್ಯಮಿಗಳ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 30ರಂದು ಕರೆದಿದ್ದಾರೆ. </p>.<p>ಈ ಸಭೆಗೆ ಮುಖ್ಯವಾಗಿ ಆರ್ಸೆಲರ್ ಮಿತ್ತಲ್, ಉತ್ತಮ ಗಾಲ್ವಾ ಮತ್ತು ವಿಜಯನಗರ ಸ್ಟೀಲ್ ಲಿಮಿಟೆಡ್ನ ಮುಖ್ಯಸ್ಥರನ್ನು ಆಹ್ವಾನಿಸಿರುವುದು ಕುತೂಹಲ ಕೆರಳಿಸಿದೆ.</p>.<p>ಈ ಮೂರು ಸಂಸ್ಥೆಗಳು ಕೈಗಾರಿಕೆ ಆರಂಭಿಸುವುದಾಗಿ ಕುಡುತಿನಿಯಲ್ಲಿ ಭಾರಿ ಪ್ರಮಾಣದ ಭೂಮಿ ಖರೀದಿಸಿವೆ. ಈ ಕಂಪನಿಗಳಿಗೆ ಭೂಮಿ ನೀಡಿರುವ ರೈತರು ತಮಗೆ ಹೆಚ್ಚಿನ ಪರಿಹಾರ ಸಿಗಬೇಕು ಎಂದು ಸಾವಿರ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಂಪನಿಗಳು ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂಬ ಒತ್ತಾಯವೂ ಇದೆ. ಈ ಮಧ್ಯೆ ಮುಖ್ಯಮಂತ್ರಿ ಸಭೆ ಆಯೋಜಿಸಿದ್ದಾರೆ. </p>.<p>ಮುಖ್ಯಮಂತ್ರಿ ಸೂಚನೆಯಂತೆ ಅವರ ವಿಶೇಷ ಕರ್ತವ್ಯಾಧಿಕಾರಿಯು ಬುಧವಾರ ಸೂಚನಾ ಪತ್ರ ಹೊರಡಿಸಿದ್ದು, ಅಗತ್ಯ ಮಾಹಿತಿಯೊಂದಿಗೆ ಬರುವಂತೆ ಪತ್ರದಲ್ಲಿ ತಿಳಿಸಲಾಗಿದೆ. </p>.<p>ಸಭೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ವಸತಿ, ವಕ್ಸ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಭೆಯ ಕುರಿತು ತಿಳಿಸುವಂತೆ ಅವರ ಆಪ್ತ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ. </p>.<p>ಜತೆಗೆ, ಸಂಸದ ಇ. ತುಕಾರಾಮ್, ಶಾಸಕ ಬಿ. ನಾಗೇಂದ್ರ, ಜೆ.ಎನ್. ಗಣೇಶ್, ಅನ್ನಪೂರ್ಣ, ಆರ್ಥಿಕ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕೆಐಎಡಿಬಿ ಸಿಇಒ, ಬಳ್ಳಾರಿ ಜಿಲ್ಲಾಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>