<p><strong>ಕೂಡ್ಲಿಗಿ:</strong> ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡಿದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.</p>.<p>ಪಟ್ಟಣದಲ್ಲಿ ನೂತನ ಕರ್ನಾಟಕ ಒನ್ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.</p>.<p>5ನೇ ಗ್ಯಾರಂಟಿ ಯುವ ನಿಧಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ ಅವರು, ವಿದ್ಯಾವಂತ ಯುವಕ, ಯುವತಿಯರ ನೆರವಿಗಾಗಿ ಸರ್ಕಾರ ಯುವ ನಿಧಿ ಯೋಜನೆ ಜಾರಿ ಮಾಡಿದ್ದು, ಎಲ್ಲಾ ಆರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.</p>.<p>ಆನಂತರ ಯುವ ನಿಧಿಗೆ ಆರ್ಜಿ ಸಲ್ಲಿಸಿದ ನಿರಜ ಅವರಿಗೆ ಮೊದಲ ಸ್ವೀಕೃತಿ ಪತ್ರವನ್ನು ವಿತರಿಸಿದರು.</p>.<p>ಮುಖಂಡರಾದ ಬಣವಿಕಲ್ಲು ಎರ್ರಿಸ್ವಾಮಿ, ಮೊರಬ ವೀರಭದ್ರಪ್ಪ, ಕರ್ನಾಟಕ ಒನ್ ಕೇಂದ್ರದ ಗಡ್ಡಿ ವಿಜಯಕುಮಾರ್, ನಿವೃತ್ತ ಶಿಕ್ಷನ ಸಿದ್ದಪ್ಪ, ಮಹೇಶ, ತಿರುಮಲ, ಖಾಜಾ ಹುಸೇನ್, ನರಸಿಂಹಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡಿದ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.</p>.<p>ಪಟ್ಟಣದಲ್ಲಿ ನೂತನ ಕರ್ನಾಟಕ ಒನ್ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.</p>.<p>5ನೇ ಗ್ಯಾರಂಟಿ ಯುವ ನಿಧಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ ಅವರು, ವಿದ್ಯಾವಂತ ಯುವಕ, ಯುವತಿಯರ ನೆರವಿಗಾಗಿ ಸರ್ಕಾರ ಯುವ ನಿಧಿ ಯೋಜನೆ ಜಾರಿ ಮಾಡಿದ್ದು, ಎಲ್ಲಾ ಆರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.</p>.<p>ಆನಂತರ ಯುವ ನಿಧಿಗೆ ಆರ್ಜಿ ಸಲ್ಲಿಸಿದ ನಿರಜ ಅವರಿಗೆ ಮೊದಲ ಸ್ವೀಕೃತಿ ಪತ್ರವನ್ನು ವಿತರಿಸಿದರು.</p>.<p>ಮುಖಂಡರಾದ ಬಣವಿಕಲ್ಲು ಎರ್ರಿಸ್ವಾಮಿ, ಮೊರಬ ವೀರಭದ್ರಪ್ಪ, ಕರ್ನಾಟಕ ಒನ್ ಕೇಂದ್ರದ ಗಡ್ಡಿ ವಿಜಯಕುಮಾರ್, ನಿವೃತ್ತ ಶಿಕ್ಷನ ಸಿದ್ದಪ್ಪ, ಮಹೇಶ, ತಿರುಮಲ, ಖಾಜಾ ಹುಸೇನ್, ನರಸಿಂಹಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>