<p><strong>ತೋರಣಗಲ್ಲು: ‘</strong>ಗ್ರಾಮೀಣ ಪ್ರದೇಶದ ಬಡ ರೈತರು ತಾವು ಬೆಳೆದ ಬೆಳೆಯನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ರೈತ ಉತ್ಪಾದಕ ಕಂಪನಿಗಳಿಗೆ ಮಾರಾಟ ಮಾಡುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು’ ಎಂದು ಸಂಡೂರು ತಾಲ್ಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥರೆಡ್ಡಿ ಹೇಳಿದರು.</p>.<p>ಗ್ರಾಮದ ಜಿಂದಾಲ್ ಕಾರ್ಖಾನೆಯ ಒಪಿಜೆ ಕೇಂದ್ರದ ಸಭಾಂಗಣದಲ್ಲಿ ಕೃಷಿ ಇಲಾಖೆ, ಜಿಂದಾಲ್ ಫೌಂಡೇಷನ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರೈತ ಉತ್ಪಾದಕ ಕಂಪನಿಗಳ ತರಬೇತಿ ಕಾರ್ಯಾಗಾರ, ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ರೈತ ಉತ್ಪಾದಕ ಕಂಪನಿಗಳಿಂದ ಬಡ ರೈತರಿಗೆ ನೇರ ಮಾರುಕಟ್ಟೆ ಸೌಲಭ್ಯದ ಜೊತೆಗೆ ಕೃಷಿ ಉತ್ಪನ್ನಗಳಿಗೆ ಸಕಾಲದಲ್ಲಿ ಉತ್ತಮ ದರ ಸಿಗಲಿದೆ. ರೈತ ಉತ್ಪಾದಕ ಕಂಪನಿಗಳು ರೈತರಿಗೆ ಕಡಿಮೆ ದರದಲ್ಲಿ ಬೀಜ, ಗೊಬ್ಬರ ಮತ್ತು ಉತ್ತಮ ಮಾರ್ಗದರ್ಶನ ನೀಡಲಿವೆ’ ಎಂದರು.</p>.<p>ವಿವಿಧ ಗ್ರಾಮಗಳ 95ಕ್ಕೂ ಹೆಚ್ಚು ರೈತ ಪ್ರತಿನಿಧಿಗಳು, 11 ರೈತ ಉತ್ಪಾದಕ ಕಂಪನಿಗಳ ಮುಖ್ಯಸ್ಥರು ಭಾಗವಹಿಸಿದ್ದರು.</p>.<p>ಜಿಂದಾಲ್ ಫೌಂಡೇಷನ್ ಸಿಎಸ್ಆರ್ ವ್ಯವಸ್ಥಾಪಕ ಪೆದ್ದಣ್ಣ ಬಿಡಾಲ, ಕೃಷಿ ಸಂಯೋಜಕ ನಾಗನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೋರಣಗಲ್ಲು: ‘</strong>ಗ್ರಾಮೀಣ ಪ್ರದೇಶದ ಬಡ ರೈತರು ತಾವು ಬೆಳೆದ ಬೆಳೆಯನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ರೈತ ಉತ್ಪಾದಕ ಕಂಪನಿಗಳಿಗೆ ಮಾರಾಟ ಮಾಡುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು’ ಎಂದು ಸಂಡೂರು ತಾಲ್ಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥರೆಡ್ಡಿ ಹೇಳಿದರು.</p>.<p>ಗ್ರಾಮದ ಜಿಂದಾಲ್ ಕಾರ್ಖಾನೆಯ ಒಪಿಜೆ ಕೇಂದ್ರದ ಸಭಾಂಗಣದಲ್ಲಿ ಕೃಷಿ ಇಲಾಖೆ, ಜಿಂದಾಲ್ ಫೌಂಡೇಷನ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರೈತ ಉತ್ಪಾದಕ ಕಂಪನಿಗಳ ತರಬೇತಿ ಕಾರ್ಯಾಗಾರ, ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ರೈತ ಉತ್ಪಾದಕ ಕಂಪನಿಗಳಿಂದ ಬಡ ರೈತರಿಗೆ ನೇರ ಮಾರುಕಟ್ಟೆ ಸೌಲಭ್ಯದ ಜೊತೆಗೆ ಕೃಷಿ ಉತ್ಪನ್ನಗಳಿಗೆ ಸಕಾಲದಲ್ಲಿ ಉತ್ತಮ ದರ ಸಿಗಲಿದೆ. ರೈತ ಉತ್ಪಾದಕ ಕಂಪನಿಗಳು ರೈತರಿಗೆ ಕಡಿಮೆ ದರದಲ್ಲಿ ಬೀಜ, ಗೊಬ್ಬರ ಮತ್ತು ಉತ್ತಮ ಮಾರ್ಗದರ್ಶನ ನೀಡಲಿವೆ’ ಎಂದರು.</p>.<p>ವಿವಿಧ ಗ್ರಾಮಗಳ 95ಕ್ಕೂ ಹೆಚ್ಚು ರೈತ ಪ್ರತಿನಿಧಿಗಳು, 11 ರೈತ ಉತ್ಪಾದಕ ಕಂಪನಿಗಳ ಮುಖ್ಯಸ್ಥರು ಭಾಗವಹಿಸಿದ್ದರು.</p>.<p>ಜಿಂದಾಲ್ ಫೌಂಡೇಷನ್ ಸಿಎಸ್ಆರ್ ವ್ಯವಸ್ಥಾಪಕ ಪೆದ್ದಣ್ಣ ಬಿಡಾಲ, ಕೃಷಿ ಸಂಯೋಜಕ ನಾಗನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>