ಕೇಂದ್ರ, ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದ್ದೇವೆ. ಗ್ರಾಮೀಣ ಮಟ್ಟದಲ್ಲಿ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ನಂತಹ ರೋಗಗಳ ಪರೀಕ್ಷೆ ಹಾಗೂ ನಿಯಂತ್ರಣ, ಗರ್ಭಿಣಿ ಬಾಣಂತಿಯರ ಆರೈಕೆ, ಇತರೆ ಆರೋಗ್ಯ ಸೇವೆಗಳನ್ನು ನೀಡುವ ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸರ್ಕಾರ ಕನಿಷ್ಟ ವೇತನ ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂದು ದೂರಿದರು.