<p>ಬಳ್ಳಾರಿ: ‘ರಾಜ್ಯ ಸರ್ಕಾರ 56,342 ಹುದ್ದೆಗಳ ಭರ್ತಿಯ ವೇಳೆ ಪರಿಶಿಷ್ಟ ಜಾತಿಗಳ ಶೇ 15ರ ಒಳ ಮೀಸಲಾತಿಯನ್ನು ಪಾಲಿಸಬೇಕು’ ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಮಾದಿಗ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು. </p>.<p>ನಗರದ ನಾರಾಯಣರಾವ್ ಉದ್ಯಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಡಿಗಿ ಚೆನ್ಪಪ್ಪ(ರಾಯಲ್) ವೃತ್ತದ ಮೂಲಕ ಹಳೇ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. </p>.<p>‘ಸರ್ಕಾರ ಫೆಬ್ರವರಿ 27 ರಂದು ಹೊರಡಿಸಿರುವ ಆದೇಶದಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಹಿಂದಿನ ಆದೇಶಗಳನ್ನು ಅನ್ವಯಿಸದೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಿದೆ. ಇದು ಮಾದಿಗ ಮತ್ತು ಇತರ ಸಮುದಾಯಗಳಿಗೆ ಮಾಡಿದ ಅನ್ಯಾಯ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. </p>.<p>‘56,342 ಖಾಲಿ ಹುದ್ದೆಗಳ ಭರ್ತಿಯನ್ನು ಶೇ 15ರ ಒಳ ಮೀಸಲಾತಿ ಅನ್ವಯವೇ ಮಾಡಬೇಕು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯ ವರ್ಗೀಕರಣದಂತೆ ಪರಿಷ್ಕೃತ ರೋಸ್ಟರ್ ವ್ಯವಸ್ಥೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಲಾಗಿದೆ. </p>.<p>‘ಶೇ 56ರ ಮೀಸಲಾತಿ ವ್ಯವಸ್ಥೆಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದ ಮುಂದೆ ಸರ್ಕಾರ ದೃಢವಾದ ವಾದ ಮಂಡಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಈ ವಿಚಾರದಲ್ಲಿ ಸರ್ಕಾರ ತಕ್ಷಣ ಸ್ಪಂದಿಸದಿದ್ದಲ್ಲಿ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಹೋರಾಟ ಸಮಿತಿ ನೀಡಿದೆ.</p>.<p>ಸಂಘಟನೆ ಮುಖಂಡರಾದ ಈಶ್ವರಪ್ಪ, ಪಂಪಾಪತಿ, ಗಂಗಾಧರ, ದುರುಗಪ್ಪ ತಳವಾರ ಮತ್ತಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ‘ರಾಜ್ಯ ಸರ್ಕಾರ 56,342 ಹುದ್ದೆಗಳ ಭರ್ತಿಯ ವೇಳೆ ಪರಿಶಿಷ್ಟ ಜಾತಿಗಳ ಶೇ 15ರ ಒಳ ಮೀಸಲಾತಿಯನ್ನು ಪಾಲಿಸಬೇಕು’ ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಮಾದಿಗ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು. </p>.<p>ನಗರದ ನಾರಾಯಣರಾವ್ ಉದ್ಯಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಡಿಗಿ ಚೆನ್ಪಪ್ಪ(ರಾಯಲ್) ವೃತ್ತದ ಮೂಲಕ ಹಳೇ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. </p>.<p>‘ಸರ್ಕಾರ ಫೆಬ್ರವರಿ 27 ರಂದು ಹೊರಡಿಸಿರುವ ಆದೇಶದಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಹಿಂದಿನ ಆದೇಶಗಳನ್ನು ಅನ್ವಯಿಸದೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಿದೆ. ಇದು ಮಾದಿಗ ಮತ್ತು ಇತರ ಸಮುದಾಯಗಳಿಗೆ ಮಾಡಿದ ಅನ್ಯಾಯ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. </p>.<p>‘56,342 ಖಾಲಿ ಹುದ್ದೆಗಳ ಭರ್ತಿಯನ್ನು ಶೇ 15ರ ಒಳ ಮೀಸಲಾತಿ ಅನ್ವಯವೇ ಮಾಡಬೇಕು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯ ವರ್ಗೀಕರಣದಂತೆ ಪರಿಷ್ಕೃತ ರೋಸ್ಟರ್ ವ್ಯವಸ್ಥೆ ಜಾರಿಗೊಳಿಸಬೇಕು’ ಎಂದು ಆಗ್ರಹಿಸಲಾಗಿದೆ. </p>.<p>‘ಶೇ 56ರ ಮೀಸಲಾತಿ ವ್ಯವಸ್ಥೆಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದ ಮುಂದೆ ಸರ್ಕಾರ ದೃಢವಾದ ವಾದ ಮಂಡಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಈ ವಿಚಾರದಲ್ಲಿ ಸರ್ಕಾರ ತಕ್ಷಣ ಸ್ಪಂದಿಸದಿದ್ದಲ್ಲಿ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಹೋರಾಟ ಸಮಿತಿ ನೀಡಿದೆ.</p>.<p>ಸಂಘಟನೆ ಮುಖಂಡರಾದ ಈಶ್ವರಪ್ಪ, ಪಂಪಾಪತಿ, ಗಂಗಾಧರ, ದುರುಗಪ್ಪ ತಳವಾರ ಮತ್ತಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>