<p><strong>ಬಳ್ಳಾರಿ:</strong> ‘ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಅಕ್ರಮ ಸಾಗಣೆ ತಡೆಗಟ್ಟುವಿಕೆ ಕಾಯ್ದೆ, 1988 (ಪಿಟ್ ಎನ್ಡಿಪಿಎಸ್) ಕಾಯ್ದೆ ಪ್ರಯೋಗಿಸಿ ಅಂತರರಾಜ್ಯ ಡ್ರಗ್ ಪೆಡ್ಲರ್ ಮೆಹಬೂಬ್ ದೌಲ ಎಂಬಾತನನ್ನು ಬಳ್ಳಾರಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. </p>.<p>ಬಳ್ಳಾರಿಯ ರಾಣಿ ತೋಟ ನಿವಾಸಿಯಾಗಿದ್ದ ದೌಲ 15 ವರ್ಷಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಬಳ್ಳಾರಿ, ಮೈಸೂರು, ಚಿತ್ರದುರ್ಗ ಸೇರಿ ರಾಜ್ಯದ ಹಲವು ಠಾಣೆಗಳಲ್ಲಿ 21 ಪ್ರಕರಣಗಳಿತ್ತು. ತಲೆಮರೆಸಿಕೊಂಡಿದ್ದ ದೌಲ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯು ಐಜಿಪಿಗೆ ದಾಖಲೆ ಸಲ್ಲಿಸಿದ್ದರು. </p>.<p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಡ್ರಗ್ಸ್ ದಂಧೆಯಲ್ಲಿ ದೌಲನ ಪಾತ್ರ ಗಮನಿಸಿದ ವಲಯ ಐಜಿಪಿ ಡಾ. ಪಿಎಸ್ ಹರ್ಷ ‘ಪಿಟ್ ಎನ್ಡಿಪಿಎಸ್’ನ ಸೆಕ್ಷ್ 3 ಅಡಿಯಲ್ಲಿ ತಮಗಿರುವ ಅಧಿಕಾರ ಬಳಸಿ ದೌಲ ಬಂಧನಕ್ಕೆ ಆದೇಶ ಹೊರಡಿಸಿದ್ದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ‘ಪಿಟ್ ಎನ್ಡಿಪಿಎಸ್’ ಕಾಯ್ದೆ ಪ್ರಯೋಗವಾಗಿದೆ ಎಂದು ವಿಭಾಗೀಯ ಹಿರಿಯ ಕಾನೂನು ಅಧಿಕಾರಿ ಬಿ.ಎಸ್ ಪಾಟೀಲ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಅಕ್ರಮ ಸಾಗಣೆ ತಡೆಗಟ್ಟುವಿಕೆ ಕಾಯ್ದೆ, 1988 (ಪಿಟ್ ಎನ್ಡಿಪಿಎಸ್) ಕಾಯ್ದೆ ಪ್ರಯೋಗಿಸಿ ಅಂತರರಾಜ್ಯ ಡ್ರಗ್ ಪೆಡ್ಲರ್ ಮೆಹಬೂಬ್ ದೌಲ ಎಂಬಾತನನ್ನು ಬಳ್ಳಾರಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. </p>.<p>ಬಳ್ಳಾರಿಯ ರಾಣಿ ತೋಟ ನಿವಾಸಿಯಾಗಿದ್ದ ದೌಲ 15 ವರ್ಷಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿದ್ದು, ಬಳ್ಳಾರಿ, ಮೈಸೂರು, ಚಿತ್ರದುರ್ಗ ಸೇರಿ ರಾಜ್ಯದ ಹಲವು ಠಾಣೆಗಳಲ್ಲಿ 21 ಪ್ರಕರಣಗಳಿತ್ತು. ತಲೆಮರೆಸಿಕೊಂಡಿದ್ದ ದೌಲ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯು ಐಜಿಪಿಗೆ ದಾಖಲೆ ಸಲ್ಲಿಸಿದ್ದರು. </p>.<p>ಕಲ್ಯಾಣ ಕರ್ನಾಟಕ ಭಾಗದಲ್ಲಿ ಡ್ರಗ್ಸ್ ದಂಧೆಯಲ್ಲಿ ದೌಲನ ಪಾತ್ರ ಗಮನಿಸಿದ ವಲಯ ಐಜಿಪಿ ಡಾ. ಪಿಎಸ್ ಹರ್ಷ ‘ಪಿಟ್ ಎನ್ಡಿಪಿಎಸ್’ನ ಸೆಕ್ಷ್ 3 ಅಡಿಯಲ್ಲಿ ತಮಗಿರುವ ಅಧಿಕಾರ ಬಳಸಿ ದೌಲ ಬಂಧನಕ್ಕೆ ಆದೇಶ ಹೊರಡಿಸಿದ್ದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ‘ಪಿಟ್ ಎನ್ಡಿಪಿಎಸ್’ ಕಾಯ್ದೆ ಪ್ರಯೋಗವಾಗಿದೆ ಎಂದು ವಿಭಾಗೀಯ ಹಿರಿಯ ಕಾನೂನು ಅಧಿಕಾರಿ ಬಿ.ಎಸ್ ಪಾಟೀಲ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>