<p><strong>ಬಳ್ಳಾರಿ:</strong> ‘ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ನ (ಕೆಐಒಸಿಎಲ್) ದೇವದಾರಿ ಕಬ್ಬಿಣದ ಅದಿರು ಗಣಿ ಗುತ್ತಿಗೆ ಅವಧಿ ವಿಸ್ತರಿಸಬಾರದು’ ಎಂದು ‘ಜನ ಸಂಗ್ರಾಮ ಪರಿಷತ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.</p>.<p>ಕೇಂದ್ರ ಗಣಿ ಸಚಿವಾಲಯವು ‘ಗಣಿ ಮತ್ತು ಖನಿಜಗಳು (ಅಭಿವೃದ್ಧಿ ಮತ್ತು ನಿಯಂತ್ರಣ) (ಎಂಎಂಡಿಆರ್) ಕಾಯ್ದೆ–1957’ರ ಸೆಕ್ಷನ್ 20(ಎ) ಅಡಿಯಲ್ಲಿನ ತನ್ನ ಪರಮಾಧಿಕಾರ ಬಳಸಿ ಇತ್ತೀಚೆಗೆ ಗಣಿ ಗುತ್ತಿಗೆಯನ್ನು 2 ವರ್ಷಗಳಿಗೆ ವಿಸ್ತರಣೆ ಮಾಡಿ, ಆದೇಶಿಸಿತ್ತು. ಇದನ್ನು ಆಕ್ಷೇಪಿಸಿರುವ ಪರಿಷತ್, ಕೇಂದ್ರದ ಆದೇಶದಂತೆ ರಾಜ್ಯ ಸರ್ಕಾರ ನಡೆದುಕೊಳ್ಳಬಾರದು ಎಂದು ಆಗ್ರಹಿಸಿದೆ. </p>.<p>ರಾಜ್ಯ ಸರ್ಕಾರವು 2024ರ ಡಿಸೆಂಬರ್ನಲ್ಲಿ ದೇವದಾರಿ ಗಣಿ ಗುತ್ತಿಗೆಯನ್ನು ಒಂದು ವರ್ಷದ ಅವಧಿಗೆ ಒಂದು ಬಾರಿಗೆ ಮಾತ್ರ ವಿಸ್ತರಣೆ ಮಾಡಿದೆ. ಎಂಎಂಡಿಆರ್ ಕಾಯ್ದೆ ಅಡಿಯಲ್ಲಿ ಇದು ಗರಿಷ್ಠ ರಿಯಾಯಿತಿ. ಈ ರಿಯಾಯಿತಿಯ ಹೊರತಾಗಿಯೂ ಕೆಐಒಸಿಎಲ್ ಗಣಿಗಾರಿಕೆ ಕಾರ್ಯಾಚರಣೆಗಳನ್ನು ಪ್ರಾರಂಭಿಸಲು ವಿಫಲವಾಗಿದೆ. ಹೀಗಾಗಿ, 470.4 ಹೆಕ್ಟೇರ್ ಗಣಿ ಗುತ್ತಿಗೆ ಪ್ರದೇಶವನ್ನು ಮೀಸಲಿಟ್ಟು ರಾಜ್ಯ ಸರ್ಕಾರ 2017ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಬೇಕು ಎಂದು ಪರಿಷತ್ ಒತ್ತಾಯಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಕುದುರೆಮುಖ ಕಬ್ಬಿಣ ಅದಿರು ಕಂಪನಿ ಲಿಮಿಟೆಡ್ನ (ಕೆಐಒಸಿಎಲ್) ದೇವದಾರಿ ಕಬ್ಬಿಣದ ಅದಿರು ಗಣಿ ಗುತ್ತಿಗೆ ಅವಧಿ ವಿಸ್ತರಿಸಬಾರದು’ ಎಂದು ‘ಜನ ಸಂಗ್ರಾಮ ಪರಿಷತ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.</p>.<p>ಕೇಂದ್ರ ಗಣಿ ಸಚಿವಾಲಯವು ‘ಗಣಿ ಮತ್ತು ಖನಿಜಗಳು (ಅಭಿವೃದ್ಧಿ ಮತ್ತು ನಿಯಂತ್ರಣ) (ಎಂಎಂಡಿಆರ್) ಕಾಯ್ದೆ–1957’ರ ಸೆಕ್ಷನ್ 20(ಎ) ಅಡಿಯಲ್ಲಿನ ತನ್ನ ಪರಮಾಧಿಕಾರ ಬಳಸಿ ಇತ್ತೀಚೆಗೆ ಗಣಿ ಗುತ್ತಿಗೆಯನ್ನು 2 ವರ್ಷಗಳಿಗೆ ವಿಸ್ತರಣೆ ಮಾಡಿ, ಆದೇಶಿಸಿತ್ತು. ಇದನ್ನು ಆಕ್ಷೇಪಿಸಿರುವ ಪರಿಷತ್, ಕೇಂದ್ರದ ಆದೇಶದಂತೆ ರಾಜ್ಯ ಸರ್ಕಾರ ನಡೆದುಕೊಳ್ಳಬಾರದು ಎಂದು ಆಗ್ರಹಿಸಿದೆ. </p>.<p>ರಾಜ್ಯ ಸರ್ಕಾರವು 2024ರ ಡಿಸೆಂಬರ್ನಲ್ಲಿ ದೇವದಾರಿ ಗಣಿ ಗುತ್ತಿಗೆಯನ್ನು ಒಂದು ವರ್ಷದ ಅವಧಿಗೆ ಒಂದು ಬಾರಿಗೆ ಮಾತ್ರ ವಿಸ್ತರಣೆ ಮಾಡಿದೆ. ಎಂಎಂಡಿಆರ್ ಕಾಯ್ದೆ ಅಡಿಯಲ್ಲಿ ಇದು ಗರಿಷ್ಠ ರಿಯಾಯಿತಿ. ಈ ರಿಯಾಯಿತಿಯ ಹೊರತಾಗಿಯೂ ಕೆಐಒಸಿಎಲ್ ಗಣಿಗಾರಿಕೆ ಕಾರ್ಯಾಚರಣೆಗಳನ್ನು ಪ್ರಾರಂಭಿಸಲು ವಿಫಲವಾಗಿದೆ. ಹೀಗಾಗಿ, 470.4 ಹೆಕ್ಟೇರ್ ಗಣಿ ಗುತ್ತಿಗೆ ಪ್ರದೇಶವನ್ನು ಮೀಸಲಿಟ್ಟು ರಾಜ್ಯ ಸರ್ಕಾರ 2017ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಬೇಕು ಎಂದು ಪರಿಷತ್ ಒತ್ತಾಯಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>