<p><strong>ಕಂಪ್ಲಿ:</strong> ‘ಆರ್.ಸಿ.ಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ’ ಎಂದು ಜೆಡಿಎಸ್ ಯುವ ಘಟಕ ರಾಜ್ಯ ಕಾರ್ಯಾಧ್ಯಕ್ಷ ರಾಜುನಾಯಕ ಅಪಾದಿಸಿದ್ದಾರೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಪೂರ್ವ ತಯಾರಿ ಇಲ್ಲದೆ ಕಾರ್ಯಕ್ರಮ ಆಯೋಜಿಸಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ ಎಂದು ತಿಳಿಸಿದ್ದಾರೆ.</p>.<p>ಲಕ್ಷಾಂತರ ಅಭಿಮಾನಿಗಳು ಒಂದೆಡೆ ಸೇರುತ್ತಾರೆ ಎನ್ನುವುದು ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರೂ ಸೂಕ್ತ ಕ್ರಮವಹಿಸದೆ ತರಾತುರಿಯಲ್ಲಿ ಸಮಾರಂಭ ಆಯೋಜಿಸಿದ್ದು, ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.</p>.<p>ಈ ಘಟನೆಯಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದು, ಸುಮಾರು 40 ಜನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತ ಕುಟುಂಬಗಳಿಗೆ ತಲಾ ₹ 50ಲಕ್ಷ ಪರಿಹಾರ ನೀಡಬೇಕು. ಘಟನೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ‘ಆರ್.ಸಿ.ಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ’ ಎಂದು ಜೆಡಿಎಸ್ ಯುವ ಘಟಕ ರಾಜ್ಯ ಕಾರ್ಯಾಧ್ಯಕ್ಷ ರಾಜುನಾಯಕ ಅಪಾದಿಸಿದ್ದಾರೆ.</p>.<p>ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಪೂರ್ವ ತಯಾರಿ ಇಲ್ಲದೆ ಕಾರ್ಯಕ್ರಮ ಆಯೋಜಿಸಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ ಎಂದು ತಿಳಿಸಿದ್ದಾರೆ.</p>.<p>ಲಕ್ಷಾಂತರ ಅಭಿಮಾನಿಗಳು ಒಂದೆಡೆ ಸೇರುತ್ತಾರೆ ಎನ್ನುವುದು ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರೂ ಸೂಕ್ತ ಕ್ರಮವಹಿಸದೆ ತರಾತುರಿಯಲ್ಲಿ ಸಮಾರಂಭ ಆಯೋಜಿಸಿದ್ದು, ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.</p>.<p>ಈ ಘಟನೆಯಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದು, ಸುಮಾರು 40 ಜನ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತ ಕುಟುಂಬಗಳಿಗೆ ತಲಾ ₹ 50ಲಕ್ಷ ಪರಿಹಾರ ನೀಡಬೇಕು. ಘಟನೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>