ಈ ಬಾವಿಯಲ್ಲಿ ಸದಾ ನೀರು ಭೂಮಿಯಿಂದ ಸುಮಾರು ಇಪ್ಪತ್ತು ಅಡಿಗಳಷ್ಟು ಆಳದಲ್ಲಿ ಸಿಗುತ್ತದೆ. ಎಷ್ಟು ನೀರು ತೆಗೆದರೂ ಈ ಬಾವಿಯ ನೀರು ಬತ್ತುವುದಿಲ್ಲ. ಬೇಸಿಗೆಯಲ್ಲಿ ನೀರು ಸ್ವಲ್ಪ ಕೆಳಕ್ಕೆ ಹೋಗಿ ನಂತರ ತನ್ನ ಮಟ್ಟಕ್ಕೆ ಬಂದು ಯಥಾಸ್ಥಿತಿಗೆ ತಲುಪುತ್ತದೆ. ಮಳೆಗಾಲದಲ್ಲಿ ಮಾತ್ರ ನೀರು ಅಕ್ಷಯಪಾತ್ರೆ ಇದ್ದ ರೀತಿಯಲ್ಲಿ ಇರುತ್ತದೆ. ಬಾವಿಯ ಒಳಗೆ ವಿಘ್ನೇಶ್ವರ, ನಾಗರ ಹಾವು, ಇಬ್ಬರು ಜಂಟಿಯಾಗಿ ನಿಂತ ಕಲಾಕೃತಿಗಳು ಸುಂದರವಾಗಿ ಕಾಣುತ್ತವೆ.