<p><strong>ಹೊಸಪೇಟೆ:</strong> ಕೃಷಿ ಕ್ಷೇತ್ರದಿಂದ ನಿರುದ್ಯೋಗ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸಲು ಸಾಧ್ಯವಿಲ್ಲ. ಹಾಗಾಗಿ ಕೈಗಾರಿಕೆಗಳ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ಸಿಕ್ಕರೆ ನಿರುದ್ಯೋಗ ಸಮಸ್ಯೆಯನ್ನು ದೊಡ್ಡಮಟ್ಟದಲ್ಲಿ ನಿವಾರಿಸಬಹುದು ಎಂದು ಜಿಂದಾಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಜ್ಜನ್ ಜಿಂದಾಲ್ ಹೇಳಿದರು.</p>.<p>ತೋರಣಗಲ್ನ ಜಿಂದಾಲ್ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೃಷಿ ನಂತರ ಕೈಗಾರಿಕೆ ಕ್ಷೇತ್ರ ದೊಡ್ಡ ಶಕ್ತಿಯಾಗಿ ಬೆಳೆಯಬೇಕು. ಈ ಕ್ಷೇತ್ರ ಇನ್ನಷ್ಟು ಬೆಳೆಯುವ ಅಗತ್ಯವಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಆಧಾರ ಸ್ತಂಭಗಳು. ಅವುಗಳು ಗಟ್ಟಿಯಾಗಿ ಬೆಳೆಯಬೇಕು. ಜಿಂದಾಲ್ ನಂತಹ ದೊಡ್ಡ ಕಂಪೆನಿಗಳು ಬೆರಳೆಣಿಕೆಯಷ್ಟಿವೆ ಎಂದರು.</p>.<p>ಕರ್ನಾಟಕ ದೇಶದ ಪ್ರಮುಖ ರಾಜ್ಯ. ಕೈಗಾರಿಕೆ ಕ್ಷೇತ್ರದಲ್ಲಿ ಈ ರಾಜ್ಯ ಬೆಳೆದರೆ ಇಡೀ ದೇಶ ಅಭಿವೃದ್ಧಿಯಾಗುತ್ತದೆ. ಯಾರೋ ಒಬ್ಬರು ಬೆಳೆದರೆ ಅಭಿವೃದ್ಧಿಯಲ್ಲ. ಎಲ್ಲರೂ ಬೆಳೆಯಬೇಕು ಎಂದರು.</p>.<p>ಮುಂದಿನ ಹತ್ತು ವರ್ಷಗಳಲ್ಲಿ ಭಾರತ, ಅಮೆರಿಕ ಹಾಗೂ ಚೀನಾ ದೊಡ್ಡ ಆರ್ಥಿಕ ಶಕ್ತಿಗಳಾಗಿ ಬೆಳೆಯಲಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ಕೃಷಿ ಕ್ಷೇತ್ರದಿಂದ ನಿರುದ್ಯೋಗ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಿಸಲು ಸಾಧ್ಯವಿಲ್ಲ. ಹಾಗಾಗಿ ಕೈಗಾರಿಕೆಗಳ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ಸಿಕ್ಕರೆ ನಿರುದ್ಯೋಗ ಸಮಸ್ಯೆಯನ್ನು ದೊಡ್ಡಮಟ್ಟದಲ್ಲಿ ನಿವಾರಿಸಬಹುದು ಎಂದು ಜಿಂದಾಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಜ್ಜನ್ ಜಿಂದಾಲ್ ಹೇಳಿದರು.</p>.<p>ತೋರಣಗಲ್ನ ಜಿಂದಾಲ್ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಗಳ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೃಷಿ ನಂತರ ಕೈಗಾರಿಕೆ ಕ್ಷೇತ್ರ ದೊಡ್ಡ ಶಕ್ತಿಯಾಗಿ ಬೆಳೆಯಬೇಕು. ಈ ಕ್ಷೇತ್ರ ಇನ್ನಷ್ಟು ಬೆಳೆಯುವ ಅಗತ್ಯವಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಆಧಾರ ಸ್ತಂಭಗಳು. ಅವುಗಳು ಗಟ್ಟಿಯಾಗಿ ಬೆಳೆಯಬೇಕು. ಜಿಂದಾಲ್ ನಂತಹ ದೊಡ್ಡ ಕಂಪೆನಿಗಳು ಬೆರಳೆಣಿಕೆಯಷ್ಟಿವೆ ಎಂದರು.</p>.<p>ಕರ್ನಾಟಕ ದೇಶದ ಪ್ರಮುಖ ರಾಜ್ಯ. ಕೈಗಾರಿಕೆ ಕ್ಷೇತ್ರದಲ್ಲಿ ಈ ರಾಜ್ಯ ಬೆಳೆದರೆ ಇಡೀ ದೇಶ ಅಭಿವೃದ್ಧಿಯಾಗುತ್ತದೆ. ಯಾರೋ ಒಬ್ಬರು ಬೆಳೆದರೆ ಅಭಿವೃದ್ಧಿಯಲ್ಲ. ಎಲ್ಲರೂ ಬೆಳೆಯಬೇಕು ಎಂದರು.</p>.<p>ಮುಂದಿನ ಹತ್ತು ವರ್ಷಗಳಲ್ಲಿ ಭಾರತ, ಅಮೆರಿಕ ಹಾಗೂ ಚೀನಾ ದೊಡ್ಡ ಆರ್ಥಿಕ ಶಕ್ತಿಗಳಾಗಿ ಬೆಳೆಯಲಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>