<p><strong>ಬಳ್ಳಾರಿ:</strong> ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಳಿಕ ದೂರಾಗಿದ್ದ ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಮತ್ತೆ ಒಂದಾಗಿದ್ದು, ಶನಿವಾರ ರಾತ್ರಿ ಜತೆಗಾಗಿ ‘ಜೂನಿಯರ್’ ಚಿತ್ರ ವೀಕ್ಷಿಸಿದರು.</p>.<p>ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ನಾಯಕ ನಟರಾಗಿ ನಟಿಸಿರುವ ಚಿತ್ರವನ್ನು ಬಳ್ಳಾರಿ ನಗರದ ನಟರಾಜ ಚಿತ್ರಮಂದಿರದಲ್ಲಿ ಇಬ್ಬರೂ ನಾಯಕರು ಅಕ್ಕಪಕ್ಕ ಕುಳಿತು ವೀಕ್ಷಿಸುವ ಮೂಲಕ ತಾವು ಒಟ್ಟಾಇರುವ ಸಂದೇಶ ರವಾನಿಸಿದರು. </p>.<p>ಸಂಡೂರು ಉಪ ಚುನಾವಣೆಯ ಸೋಲಿನ ಹೊಣೆಗಾರಿಕೆ ವಿಚಾರವಾಗಿ ಇಬ್ಬರೂ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ದರು. ಆ ಬಳಿಕ ಇಬ್ಬರೂ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಇತ್ತೀಚೆಗೆ ಕೊಪ್ಪಳದಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸಮ್ಮುಖ ಜೊತೆಯಾಗಿದ್ದರು. </p>.<p>ಕಿರೀಟಿ ಅವರ ಚಿತ್ರವನ್ನು ಮುಂದಿನ ದಿನಗಳಲ್ಲಿ ನೋಡುವುದಾಗಿಯೂ, ಸಿನಿಮಾಕ್ಕೆ ಶುಭ ಹಾರೈಸುವುದಾಗಿಯೂ ಶ್ರೀರಾಮುಲು ಕೆಲ ದಿನಗಳ ಹಿಂದೆ ಮಾಧ್ಯಮಗಳಿಗೆ ತಿಳಿಸಿದ್ದರು. ಹೀಗಿರುವಾಗಲೇ ಶನಿವಾರ ಇಬ್ಬರೂ ಸೇರಿ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಬಿಜೆಪಿಯ ಸ್ಥಳೀಯ ನಾಯಕರು, ಕಾರ್ಪೊರೇಟರ್ಗಳು ಮತ್ತಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಳಿಕ ದೂರಾಗಿದ್ದ ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಮತ್ತೆ ಒಂದಾಗಿದ್ದು, ಶನಿವಾರ ರಾತ್ರಿ ಜತೆಗಾಗಿ ‘ಜೂನಿಯರ್’ ಚಿತ್ರ ವೀಕ್ಷಿಸಿದರು.</p>.<p>ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ನಾಯಕ ನಟರಾಗಿ ನಟಿಸಿರುವ ಚಿತ್ರವನ್ನು ಬಳ್ಳಾರಿ ನಗರದ ನಟರಾಜ ಚಿತ್ರಮಂದಿರದಲ್ಲಿ ಇಬ್ಬರೂ ನಾಯಕರು ಅಕ್ಕಪಕ್ಕ ಕುಳಿತು ವೀಕ್ಷಿಸುವ ಮೂಲಕ ತಾವು ಒಟ್ಟಾಇರುವ ಸಂದೇಶ ರವಾನಿಸಿದರು. </p>.<p>ಸಂಡೂರು ಉಪ ಚುನಾವಣೆಯ ಸೋಲಿನ ಹೊಣೆಗಾರಿಕೆ ವಿಚಾರವಾಗಿ ಇಬ್ಬರೂ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ದರು. ಆ ಬಳಿಕ ಇಬ್ಬರೂ ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಇತ್ತೀಚೆಗೆ ಕೊಪ್ಪಳದಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸಮ್ಮುಖ ಜೊತೆಯಾಗಿದ್ದರು. </p>.<p>ಕಿರೀಟಿ ಅವರ ಚಿತ್ರವನ್ನು ಮುಂದಿನ ದಿನಗಳಲ್ಲಿ ನೋಡುವುದಾಗಿಯೂ, ಸಿನಿಮಾಕ್ಕೆ ಶುಭ ಹಾರೈಸುವುದಾಗಿಯೂ ಶ್ರೀರಾಮುಲು ಕೆಲ ದಿನಗಳ ಹಿಂದೆ ಮಾಧ್ಯಮಗಳಿಗೆ ತಿಳಿಸಿದ್ದರು. ಹೀಗಿರುವಾಗಲೇ ಶನಿವಾರ ಇಬ್ಬರೂ ಸೇರಿ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಬಿಜೆಪಿಯ ಸ್ಥಳೀಯ ನಾಯಕರು, ಕಾರ್ಪೊರೇಟರ್ಗಳು ಮತ್ತಿತರರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>