<p><strong>ವಿಜಯನಗರ (ಹೊಸಪೇಟೆ):</strong> ತಾಲ್ಲೂಕಿನ ಕಮಲಾಪುರ ಪಟ್ಟಣ ಪಂಚಾಯತಿಯಲ್ಲಿ 2021-22ನೇ ಸಾಲಿಗೆ ಒಟ್ಟು ₹47.92 ಕೋಟಿ ಆಯವ್ಯಯ ಮಂಡಿಸಿದೆ.</p>.<p>ಪಟ್ಟಣ ಪಂಚಾಯತಿಯ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ಆಯ-ವ್ಯಯ ಸಭೆಯಲ್ಲಿ ಪ್ರಸಕ್ತ ವರ್ಷದ ಬಜೆಟ್ ಮಂಡಿಸಲಾಯಿತು.</p>.<p>ಪ್ರಸಕ್ತ ವರ್ಷದಲ್ಲಿ ಎಸ್.ಎಫ್.ಸಿ ಮತ್ತು 15ನೇ ಹಣಕಾಸು ಯೋಜನೆಯಿಂದ ₹6 ಕೋಟಿ ಅನುದಾನದ ನಿರೀಕ್ಷೆಯಿದೆ. ಪಟ್ಟಣದಲ್ಲಿ ಸಾಮೂಹಿಕ ಶೌಚಾಲಯ ನಿರ್ವಹಣೆ, ಘನತ್ಯಾಜ್ಯ ವಸ್ತು, ಆಂತರಿಕ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿ, ನಗರೋತ್ಥಾನ ಮುನ್ಸಿಪಾಲಿಟಿ-3ರ ಯೋಜನೆಯಲ್ಲಿ ಮಂಜೂರಾದ ₹2 ಕೋಟಿ ಹಾಗೂ ಜಿಲ್ಲಾ ಖನಿಜ ನಿಧಿಯಿಂದ ₹14 ಕೋಟಿ ಅನುದಾನದ ನಿರೀಕ್ಷೆಗಳಿವೆ.</p>.<p>ಪಟ್ಟಣದಲ್ಲಿ ಬಸ್ ನಿಲ್ದಾಣಗಳ ನವೀಕರಣ, ಪಂಚಾಯಿತಿ ಕಚೇರಿ ನಿರ್ವಹಣೆ ಹಾಗೂ ಮಳಿಗೆಗಳನ್ನು ನಿರ್ವಹಿಸುವ ಕಾಮಗಾರಿಗಳ ಚಾಲನೆ, ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದ ಬದಲು ವಿಲೇವಾರಿ ಉದ್ಯಾನಕ್ಕಾಗಿ ಯೋಜನೆ ರೂಪಿಸುವ ಚಿಂತನೆ ಹೊಂದಲಾಗಿದೆ.</p>.<p>ಹೊಸದಾಗಿ ನಿರ್ಮಾಣಗೊಂಡ 30 ಶೌಚಾಲಯಗಳ ನಿರ್ವಹಣೆಗಾಗಿ ಟೆಂಡರ್ ಕರೆಯುವುದು. ರಾಜೀವ್ ಗಾಂಧಿ ಗ್ರಾಮೀಣ ವಸತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಲು ಸರ್ಕಾರದ ವತಿಯಿಂದ ಮಂಜೂರಾತಿ ಪಡೆಯುವುದು ಈ ಸಾಲಿನ ಬಜೆಟ್ ನ ಪ್ರಮುಖ ಅಂಶಗಳಾಗಿವೆ.</p>.<p>ಸಭೆಯಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ನಾಗೇಶ್, ಅಧ್ಯಕ್ಷ ಸೈಯದ್ ಅಮಾನುಲ್ಲಾ, ಉಪಾಧ್ಯಕ್ಷೆ ಬೋರಮ್ಮ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಕಿಶೋರ್ ಕುಮಾರ್ ಸೇರಿದಂತೆ ಪಟ್ಟಣ ಪಂಚಾಯಿತಿಯ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯನಗರ (ಹೊಸಪೇಟೆ):</strong> ತಾಲ್ಲೂಕಿನ ಕಮಲಾಪುರ ಪಟ್ಟಣ ಪಂಚಾಯತಿಯಲ್ಲಿ 2021-22ನೇ ಸಾಲಿಗೆ ಒಟ್ಟು ₹47.92 ಕೋಟಿ ಆಯವ್ಯಯ ಮಂಡಿಸಿದೆ.</p>.<p>ಪಟ್ಟಣ ಪಂಚಾಯತಿಯ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ಆಯ-ವ್ಯಯ ಸಭೆಯಲ್ಲಿ ಪ್ರಸಕ್ತ ವರ್ಷದ ಬಜೆಟ್ ಮಂಡಿಸಲಾಯಿತು.</p>.<p>ಪ್ರಸಕ್ತ ವರ್ಷದಲ್ಲಿ ಎಸ್.ಎಫ್.ಸಿ ಮತ್ತು 15ನೇ ಹಣಕಾಸು ಯೋಜನೆಯಿಂದ ₹6 ಕೋಟಿ ಅನುದಾನದ ನಿರೀಕ್ಷೆಯಿದೆ. ಪಟ್ಟಣದಲ್ಲಿ ಸಾಮೂಹಿಕ ಶೌಚಾಲಯ ನಿರ್ವಹಣೆ, ಘನತ್ಯಾಜ್ಯ ವಸ್ತು, ಆಂತರಿಕ ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿ, ನಗರೋತ್ಥಾನ ಮುನ್ಸಿಪಾಲಿಟಿ-3ರ ಯೋಜನೆಯಲ್ಲಿ ಮಂಜೂರಾದ ₹2 ಕೋಟಿ ಹಾಗೂ ಜಿಲ್ಲಾ ಖನಿಜ ನಿಧಿಯಿಂದ ₹14 ಕೋಟಿ ಅನುದಾನದ ನಿರೀಕ್ಷೆಗಳಿವೆ.</p>.<p>ಪಟ್ಟಣದಲ್ಲಿ ಬಸ್ ನಿಲ್ದಾಣಗಳ ನವೀಕರಣ, ಪಂಚಾಯಿತಿ ಕಚೇರಿ ನಿರ್ವಹಣೆ ಹಾಗೂ ಮಳಿಗೆಗಳನ್ನು ನಿರ್ವಹಿಸುವ ಕಾಮಗಾರಿಗಳ ಚಾಲನೆ, ಘನತ್ಯಾಜ್ಯ ವಸ್ತು ವಿಲೇವಾರಿ ಘಟಕದ ಬದಲು ವಿಲೇವಾರಿ ಉದ್ಯಾನಕ್ಕಾಗಿ ಯೋಜನೆ ರೂಪಿಸುವ ಚಿಂತನೆ ಹೊಂದಲಾಗಿದೆ.</p>.<p>ಹೊಸದಾಗಿ ನಿರ್ಮಾಣಗೊಂಡ 30 ಶೌಚಾಲಯಗಳ ನಿರ್ವಹಣೆಗಾಗಿ ಟೆಂಡರ್ ಕರೆಯುವುದು. ರಾಜೀವ್ ಗಾಂಧಿ ಗ್ರಾಮೀಣ ವಸತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಲು ಸರ್ಕಾರದ ವತಿಯಿಂದ ಮಂಜೂರಾತಿ ಪಡೆಯುವುದು ಈ ಸಾಲಿನ ಬಜೆಟ್ ನ ಪ್ರಮುಖ ಅಂಶಗಳಾಗಿವೆ.</p>.<p>ಸಭೆಯಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ನಾಗೇಶ್, ಅಧ್ಯಕ್ಷ ಸೈಯದ್ ಅಮಾನುಲ್ಲಾ, ಉಪಾಧ್ಯಕ್ಷೆ ಬೋರಮ್ಮ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಕಿಶೋರ್ ಕುಮಾರ್ ಸೇರಿದಂತೆ ಪಟ್ಟಣ ಪಂಚಾಯಿತಿಯ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>