<p><strong>ಕಂಪ್ಲಿ:</strong> ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮದಲ್ಲಿ ಮಾವಿನಹಳ್ಳಿಯ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ಆಶ್ರಯದಲ್ಲಿ ಭಾವಗೀತೆ ಮತ್ತು ಬಯಲಾಟ ಪ್ರದರ್ಶನ ಬುಧವಾರ ಜರುಗಿತು.</p>.<p>ಎಚ್.ಲೋಕರಾಜ್ ತಂಡದವರು ಭಾವಗೀತೆ ಪ್ರಸ್ತುತಪಡಿಸಿದರು. ಕೆ.ಪಂಪಾಪತಿ, ಎಚ್.ಆರ್. ಪ್ರವೀಣ್ಕುಮಾರ್, ರೇಣುಕಾರಾಜ, ಬಿ.ಕೆ. ಸಿದ್ದಪ್ಪ ಧರ್ಮಪ್ಪ ತಂಡದವರು ಪ್ರದರ್ಶಿಸಿದ ಬಯಲಾಟ ಪ್ರದರ್ಶನ ನೆರೆದಿದ್ದ ಶಾಲಾ ಮಕ್ಕಳ ಮತ್ತು ಗ್ರಾಮಸ್ಥರ ಮನಸೂರೆಗೊಂಡಿತು.</p>.<p>ಇದಕ್ಕೂ ಮುನ್ನ ಕುಡುತಿನಿಯ ಹಾರ್ಮೋನಿಯಂ ಮಾಸ್ಟರ್ ಡಿ.ಎಂ.ಮಂಜುನಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಬಯಲಾಟ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಬಯಲಾಟ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಅದರಿಂದ ಕಲಾವಿದರಿಗೆ ಅನುಕೂಲವಾಗಲಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ತಬಲಾ ವಾದಕ ಚಾಗೆ ವರಬಸಪ್ಪ ಮಾತನಾಡಿ, ಬಯಲಾಟ ಪ್ರದರ್ಶನಕ್ಕೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಖರ್ಚು ತಗುಲುವುದರಿಂದ ಈ ಕಲೆ ಇಂದು ಜನಮಾನಸದಿಂದ ದೂರ ಸರಿಯುತ್ತಿದೆ. ಕರ್ನಾಟಕ ಬಯಲಾಟ ಅಕಾಡೆಮಿಯವರು ಗಮನಹರಿಸಿ ಪ್ರಸ್ತುತ ಕಲೆ ಪೋಷಿಸುವಂತೆ ಮನವಿ ಮಾಡಿದರು.</p>.<p>ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ಗುರುಮಹಾಂತೇಶ, ಕಾರ್ಯದರ್ಶಿ ಕುರುಬರ ಹೇಮೇಶ್ವರ, ಎಸ್ಡಿಎಂಸಿ ಅಧ್ಯಕ್ಷ ಗುರುಮೂರ್ತಿ, ಬಯಲಾಟ ಕಲಾವಿದ ಕಂದಾರ್ ತಿಪ್ಪೇಸ್ವಾಮಿ, ಶಿಕ್ಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-25-309954228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮದಲ್ಲಿ ಮಾವಿನಹಳ್ಳಿಯ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ಆಶ್ರಯದಲ್ಲಿ ಭಾವಗೀತೆ ಮತ್ತು ಬಯಲಾಟ ಪ್ರದರ್ಶನ ಬುಧವಾರ ಜರುಗಿತು.</p>.<p>ಎಚ್.ಲೋಕರಾಜ್ ತಂಡದವರು ಭಾವಗೀತೆ ಪ್ರಸ್ತುತಪಡಿಸಿದರು. ಕೆ.ಪಂಪಾಪತಿ, ಎಚ್.ಆರ್. ಪ್ರವೀಣ್ಕುಮಾರ್, ರೇಣುಕಾರಾಜ, ಬಿ.ಕೆ. ಸಿದ್ದಪ್ಪ ಧರ್ಮಪ್ಪ ತಂಡದವರು ಪ್ರದರ್ಶಿಸಿದ ಬಯಲಾಟ ಪ್ರದರ್ಶನ ನೆರೆದಿದ್ದ ಶಾಲಾ ಮಕ್ಕಳ ಮತ್ತು ಗ್ರಾಮಸ್ಥರ ಮನಸೂರೆಗೊಂಡಿತು.</p>.<p>ಇದಕ್ಕೂ ಮುನ್ನ ಕುಡುತಿನಿಯ ಹಾರ್ಮೋನಿಯಂ ಮಾಸ್ಟರ್ ಡಿ.ಎಂ.ಮಂಜುನಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಬಯಲಾಟ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಬಯಲಾಟ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಅದರಿಂದ ಕಲಾವಿದರಿಗೆ ಅನುಕೂಲವಾಗಲಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ತಬಲಾ ವಾದಕ ಚಾಗೆ ವರಬಸಪ್ಪ ಮಾತನಾಡಿ, ಬಯಲಾಟ ಪ್ರದರ್ಶನಕ್ಕೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಖರ್ಚು ತಗುಲುವುದರಿಂದ ಈ ಕಲೆ ಇಂದು ಜನಮಾನಸದಿಂದ ದೂರ ಸರಿಯುತ್ತಿದೆ. ಕರ್ನಾಟಕ ಬಯಲಾಟ ಅಕಾಡೆಮಿಯವರು ಗಮನಹರಿಸಿ ಪ್ರಸ್ತುತ ಕಲೆ ಪೋಷಿಸುವಂತೆ ಮನವಿ ಮಾಡಿದರು.</p>.<p>ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ಗುರುಮಹಾಂತೇಶ, ಕಾರ್ಯದರ್ಶಿ ಕುರುಬರ ಹೇಮೇಶ್ವರ, ಎಸ್ಡಿಎಂಸಿ ಅಧ್ಯಕ್ಷ ಗುರುಮೂರ್ತಿ, ಬಯಲಾಟ ಕಲಾವಿದ ಕಂದಾರ್ ತಿಪ್ಪೇಸ್ವಾಮಿ, ಶಿಕ್ಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-25-309954228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>