<p><strong>ಕಂಪ್ಲಿ:</strong> ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಮುಚ್ಚುವುದನ್ನು ವಿರೋಧಿಸಿ ಶನಿವಾರ ಪ್ರತಿಭಟನೆ ನಡೆಯಿತು.</p>.<p>ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಸರ್ಕಾರ ತನ್ನ ಹಠಮಾರಿ ಧೋರಣೆ ಬಿಡದೆ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಮುಂದಾಗಿರುವುದನ್ನು ತೀವ್ರವಾಗಿ ಖಂಡಿಸಿದರು.</p>.<p>‘ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಗಳನ್ನು ಮುಚ್ಚಿ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ಈ ಮೂಲಕ ನಡೆದಿದೆ’ ಎಂದು ದೂರಿದರು.</p>.<p>ರೈತರ ಮತ್ತು ಕೂಲಿ ಕಾರ್ಮಿಕರು ಮಕ್ಕಳು 4ರಿಂದ 5 ಕಿ.ಮೀ ದೂರ ಹೋಗಿ ಶಿಕ್ಷಣ ಪಡೆಯಲು ತೊಂದರೆಯಾಗುತ್ತದೆ. ಅಲ್ಲದೆ, ಹಳ್ಳಿಯಿಂದ ಹಳ್ಳಿಗೆ ಹೋಗಲು ಎಷ್ಟೊ ಕಡೆ ಸರಿಯಾದ ರಸ್ತೆ, ಬಸ್ ಸಂಪರ್ಕವಿಲ್ಲ. ಈ ಕಾರಣದಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣದ ಹಿತಾಸಕ್ತಿಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಎಐಕೆ ಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ, ಗ್ರಾಮಸ್ಥರಾದ ತಿಪ್ಪೇಸ್ವಾಮಿ, ಕರಿಯಪ್ಪ, ಮಲ್ಲಿಕಾರ್ಜುನ, ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-25-126731837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ:</strong> ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಮುಚ್ಚುವುದನ್ನು ವಿರೋಧಿಸಿ ಶನಿವಾರ ಪ್ರತಿಭಟನೆ ನಡೆಯಿತು.</p>.<p>ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ, ಸರ್ಕಾರ ತನ್ನ ಹಠಮಾರಿ ಧೋರಣೆ ಬಿಡದೆ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಮುಂದಾಗಿರುವುದನ್ನು ತೀವ್ರವಾಗಿ ಖಂಡಿಸಿದರು.</p>.<p>‘ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಗಳನ್ನು ಮುಚ್ಚಿ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ ಈ ಮೂಲಕ ನಡೆದಿದೆ’ ಎಂದು ದೂರಿದರು.</p>.<p>ರೈತರ ಮತ್ತು ಕೂಲಿ ಕಾರ್ಮಿಕರು ಮಕ್ಕಳು 4ರಿಂದ 5 ಕಿ.ಮೀ ದೂರ ಹೋಗಿ ಶಿಕ್ಷಣ ಪಡೆಯಲು ತೊಂದರೆಯಾಗುತ್ತದೆ. ಅಲ್ಲದೆ, ಹಳ್ಳಿಯಿಂದ ಹಳ್ಳಿಗೆ ಹೋಗಲು ಎಷ್ಟೊ ಕಡೆ ಸರಿಯಾದ ರಸ್ತೆ, ಬಸ್ ಸಂಪರ್ಕವಿಲ್ಲ. ಈ ಕಾರಣದಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣದ ಹಿತಾಸಕ್ತಿಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಎಐಕೆ ಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ, ಗ್ರಾಮಸ್ಥರಾದ ತಿಪ್ಪೇಸ್ವಾಮಿ, ಕರಿಯಪ್ಪ, ಮಲ್ಲಿಕಾರ್ಜುನ, ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-25-126731837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>