<p>ಕಂಪ್ಲಿ: ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ನಕಲಿ, ಕಳಪೆ ಗುಣಮಟ್ಟದ ಕುಡಿಯುವ ನೀರು ಹಾಗೂ ಅವಧಿ ಮೀರಿದ ತಂಪು ಪಾನೀಯಗಳನ್ನು ಮಾರಾಟ ಮಾಡಲಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.</p>.<p>ಸಮೀಪದ ಎಮ್ಮಿಗನೂರು ಗ್ರಾಮದ ರೈತ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ವಿ. ವೀರೇಶ್ ಮಾತನಾಡಿ, ‘ಕೆಲ ದಿನಗಳ ಹಿಂದೆ ತಂಪು ಪಾನೀಯ ಸೇವಿಸಿ ಗ್ರಾಮದ ಬಾಲಕನೊಬ್ಬ ಅಸ್ವಸ್ಥನಾಗಿದ್ದ ಪ್ರಕರಣ ಮುಚ್ಚಿಹಾಕಲಾಗಿದೆ’ ಎಂದು ಆರೋಪಿಸಿದರು.</p>.<p>‘ಗ್ರಾಮದಲ್ಲಿ ಸಿದ್ಧವಾಗುವ ಕುಡಿಯುವ ನೀರಿನ ಬಾಟಲ್ಗಳಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿವೆ. ಗ್ರಾಮದಲ್ಲಿ ಕಳಪೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಈ ಕುರಿತು ತಾಲ್ಲೂಕು ಆಡಳಿತ, ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಏ.7ರಂದು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಈ ವೇಳೆ ರೈತ ಮುಖಂಡ ಬಿ. ಸದಾಶಿವಪ್ಪ, ಎಸ್ಡಿಎಂಸಿ ಅಧ್ಯಕ್ಷ ಬಿ. ರಾಜು, ಪ್ರಮುಖರಾದ ಸಿ. ಬಾಷಸಾಬ್, ಎಸ್. ರಾಮಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-25-1331184125</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ನಕಲಿ, ಕಳಪೆ ಗುಣಮಟ್ಟದ ಕುಡಿಯುವ ನೀರು ಹಾಗೂ ಅವಧಿ ಮೀರಿದ ತಂಪು ಪಾನೀಯಗಳನ್ನು ಮಾರಾಟ ಮಾಡಲಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.</p>.<p>ಸಮೀಪದ ಎಮ್ಮಿಗನೂರು ಗ್ರಾಮದ ರೈತ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ವಿ. ವೀರೇಶ್ ಮಾತನಾಡಿ, ‘ಕೆಲ ದಿನಗಳ ಹಿಂದೆ ತಂಪು ಪಾನೀಯ ಸೇವಿಸಿ ಗ್ರಾಮದ ಬಾಲಕನೊಬ್ಬ ಅಸ್ವಸ್ಥನಾಗಿದ್ದ ಪ್ರಕರಣ ಮುಚ್ಚಿಹಾಕಲಾಗಿದೆ’ ಎಂದು ಆರೋಪಿಸಿದರು.</p>.<p>‘ಗ್ರಾಮದಲ್ಲಿ ಸಿದ್ಧವಾಗುವ ಕುಡಿಯುವ ನೀರಿನ ಬಾಟಲ್ಗಳಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿವೆ. ಗ್ರಾಮದಲ್ಲಿ ಕಳಪೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಈ ಕುರಿತು ತಾಲ್ಲೂಕು ಆಡಳಿತ, ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಏ.7ರಂದು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಈ ವೇಳೆ ರೈತ ಮುಖಂಡ ಬಿ. ಸದಾಶಿವಪ್ಪ, ಎಸ್ಡಿಎಂಸಿ ಅಧ್ಯಕ್ಷ ಬಿ. ರಾಜು, ಪ್ರಮುಖರಾದ ಸಿ. ಬಾಷಸಾಬ್, ಎಸ್. ರಾಮಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-25-1331184125</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>