<p>ಕಂಪ್ಲಿ: ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಬವ ಅಭಿವೃದ್ಧಿ ನಿಗಮದ 2021-22 ಮತ್ತು 22-23ನೇ ಸಾಲಿನ 15 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಬುಧವಾರ ಪರಿಕರ ವಿತರಿಸಲಾಯಿತು.</p>.<p>ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಕೆ.ಎಚ್. ಲಕ್ಷ್ಮಣ ಮಾತನಾಡಿ, ಶಾಸಕ ಜೆ.ಎನ್. ಗಣೇಶ್ ಅವರ ಸೂಚನೆಯಂತೆ ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ರೈತ ಫಲಾನುಭವಿಗಳಿಗೆ ತಲುಪಿಸಲಾಗಿದೆ. ರೈತರು ಸದ್ಬಳಕೆ ಮಾಡಿಕೊಂಡು ಪ್ರಗತಿ ಹೊಂದುವಂತೆ ಮನವಿ ಮಾಡಿದರು.</p>.<p>ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 3 ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮದಡಿ 12 ಸೇರಿ 15 ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಕಲ್ಪಿಸಲಾಗಿದೆ ಎಂದರು.</p>.<p>ಫಲಾನುಭವಿಗಳಾದ ಹರಿಜನ ಮಾರೆಪ್ಪ, ದುರುಗಮ್ಮ, ಸಿ.ಹನುಮಂತಪ್ಪ, ಸಿ.ಕಟ್ಟೆಪ್ಪ, ಉಪ್ಪಾರಹಳ್ಳಿ ಆಂಜನೇಯ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-1070986870</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಂಪ್ಲಿ: ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಬವ ಅಭಿವೃದ್ಧಿ ನಿಗಮದ 2021-22 ಮತ್ತು 22-23ನೇ ಸಾಲಿನ 15 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಬುಧವಾರ ಪರಿಕರ ವಿತರಿಸಲಾಯಿತು.</p>.<p>ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಕೆ.ಎಚ್. ಲಕ್ಷ್ಮಣ ಮಾತನಾಡಿ, ಶಾಸಕ ಜೆ.ಎನ್. ಗಣೇಶ್ ಅವರ ಸೂಚನೆಯಂತೆ ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ರೈತ ಫಲಾನುಭವಿಗಳಿಗೆ ತಲುಪಿಸಲಾಗಿದೆ. ರೈತರು ಸದ್ಬಳಕೆ ಮಾಡಿಕೊಂಡು ಪ್ರಗತಿ ಹೊಂದುವಂತೆ ಮನವಿ ಮಾಡಿದರು.</p>.<p>ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 3 ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮದಡಿ 12 ಸೇರಿ 15 ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಕಲ್ಪಿಸಲಾಗಿದೆ ಎಂದರು.</p>.<p>ಫಲಾನುಭವಿಗಳಾದ ಹರಿಜನ ಮಾರೆಪ್ಪ, ದುರುಗಮ್ಮ, ಸಿ.ಹನುಮಂತಪ್ಪ, ಸಿ.ಕಟ್ಟೆಪ್ಪ, ಉಪ್ಪಾರಹಳ್ಳಿ ಆಂಜನೇಯ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-25-1070986870</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>